Homeಕರ್ನಾಟಕಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

ಕೃಷಿ ಕಾನೂನುಗಳ ವಿರುದ್ಧ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ಪ್ರತಿಭಟನೆ

’ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ’

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟ ಪ್ರತಿಭಟನೆ ನಡೆಸಿತು.

ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಸಹಭಾಗಿ ಸಂಘಟನೆಗಳಾದ, ದ್ರಾವಿಡ ವಿಡುದಲೈ ಕಳಗಂ, ಮಾಕ್ಸ್ ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಪ್ರಜಾ ತಾಂತ್ರಿಕ ಜನರ ವೇದಿಕೆ, ಕರ್ನಾಟಕ ತಮಿಳು ಮಕ್ಕಳು ಇಯೆಕಂ, ಪ್ರಜಾ ವಿಮೋಚನ ಚಳುವಳಿ, ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ಜನ ಜಾಗೃತಿ ವೇದಿಕೆ, ಫ್ಯಾಂಥರ್ ಆಫ್ ಇಂಡಿಯಾ, ಭಾರತೀಯ ದಲಿತ ಪ್ಯಾಂಥರ್ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾ ವಿಮೋಚನಾ ಸಮಿತಿಯ ಮಧುರೆ ಮಾತನಾಡಿ, “ಕಾರ್ಪೋರೇಟ್ ಮಾಧ್ಯಮಗಳ ಸಹಾಯದಿಂದ ದೇಶಾದ್ಯಂತ ಕೋಮುವಾದವನ್ನು ಪ್ರಚೋದಿಸಿ ಕಾರ್ಪೋರೇಟ್ ಕಂಪನಿಗಳ ಹಣಬಲದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದೇಶದ ಎಲ್ಲಾ ಸಂಪನ್ಮೂಲಗಳನ್ನು ಕಾರ್ಪೋರೇಟ್ ಕಂಪನಿಗಳಿಗೆ ಧಾರೆ ಎರೆಯಲು ಅನೇಕ ಅನೇಕ ಜನ ವಿರೋಧಿ ಕಾಯಿದೆಗಳನ್ನು ಜಾರಿ ಮಾಡುತ್ತಿದೆ” ಎಂದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

“ಕಾರ್ಪೋರೇಟ್ ಶಕ್ತಿಗಳ ಅನುಕೂಲಕ್ಕಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತ ಸಮುದಾಯವನ್ನು ದಿವಾಳಿಗೊಳಿಸಿ ಕೃಷಿ ಉತ್ಪಾದನೆಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವುದು ಈ ಕಾಯಿದೆಗಳ ನಿಜವಾದ ಉದ್ದೇಶ” ಎಂದು ಆರೋಪಿಸಿದರು.

ಕಾಯ್ದೆ ವಿರೋಧಿಸಿ ಕೆನಡಾ, ಇಂಗ್ಲೇಂಡ್, ಆಸ್ಟ್ರೇಲಿಯಾ, ಅಮೆರಿಕಾ ಮತ್ತು ಇತರೆ ದೇಶಗಳ ಜನರು ಈ ಚಳುವಳಿಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಮೇಲೆ ಸರ್ಕಾರ ನಡೆಸುತ್ತಿರುವ ದಮನಕಾರಿ ನೀತಿಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಜನಪರ ಸಂಘಟನೆಗಳ ಐಕ್ಯ ವೇದಿಕೆಯಾದ ಫ್ಯಾಸಿಸ್ಟ್ ವಿರೋಧಿ ಒಕ್ಕೂಟಗಳ ಹಕ್ಕೊತ್ತಾಯಗಳು

1. ಮೂರು ಜನವಿರೋಧಿ ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯಿದೆಗಳನ್ನು ರದ್ದುಗೊಳಿಸಬೇಕು.
2. ಸ್ವಾಮಿನಾಥನ್ ವರದಿಯನ್ನು ಅನುಷ್ಠಾನಗೊಳಿಸಬೇಕು.
3. ವಿದ್ಯುತ್ ತಿದ್ದುಪಡಿ ಕಾಯ್ದೆ-2020 ರದ್ದುಗೊಳಿಸಬೇಕು.
4. ಭೂ ಸುಧಾರಣಾ ತಿದ್ದುಪಡಿ ರದ್ದಾಗಬೇಕು.
5. ರೈತ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು.

ರಾಜ್ಯದಲ್ಲಿ ಇಂದು ಕೂಡ ಕರ್ನಾಟಕ ರಕ್ಷಣ ವೇದಿಕೆಯಿಂದ ಕಾಲ್ನಡಿಗೆ ಜಾಥಾ ನಡೆಸಿ ಕಾಯ್ದೆಗಳನ್ನು ವಿರೋಧಿಸಿತು. ಐಕ್ಯಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬಾರುಕೋಲು ಚಳವಳಿ ನಡೆಸಲಾಯಿತು. ನಾಳೆಯು ಕೂಡ ರಾಜಭವನ ಮುತ್ತಿಗೆ ಹಾಕಲಾಗುತ್ತದೆ ಎಂದು ಐಕ್ಯ ಹೋರಾಟ ವೇದಿಕೆ ಕರೆ ಕೊಟ್ಟಿದೆ.


ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ ಪವಾರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...