Homeಮುಖಪುಟಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ. ಚುನಾವಣೆ ಬಹಿಷ್ಕರಿಸಲು ನಿರ್ಧಾರ

- Advertisement -
- Advertisement -

ಶನಿವಾರ (ಏ.13) ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಕಿ ಸಮುದಾಯದ ಇಬ್ಬರು ‘ಗ್ರಾಮ ಸ್ವಯಂ ಸೇವಕರು’ ಕೊಲ್ಲಲ್ಪಟ್ಟಿದ್ದಾರೆ. ಇದನ್ನು ಖಂಡಿಸಿ ಮಣಿಪುರದ ಚುರಾಚಂದ್‌ಪುರ, ಕಾಂಗ್‌ಪೊಕ್ಪಿ ಜಿಲ್ಲೆಗಳಾದ್ಯಂತ ಮತ್ತು ನವ ದೆಹಲಿಯಲ್ಲಿ ಕುಕಿ-ಝೋ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ಎನ್‌ಸಿಆರ್‌ನಲ್ಲಿರುವ ಕುಕಿ ವಿದ್ಯಾರ್ಥಿಗಳ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ಸಂಘರ್ಷವನ್ನು ಶಮನಗೊಳಿಸುವುದಾಗಿ ಭರವಸೆ ನೀಡಬೇಕು ಎಂದು ಆಗ್ರಹಿಸಿದೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದು ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರದಲ್ಲಿ ಕುಕಿ-ಝೋ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನಾಕ್ರೋಶವಿರುವ ಕಾರಣ ರಾಜಕೀಯ ಪಕ್ಷಗಳು ಬೀದಿಗಿಳಿದು ಚುನಾವಣಾ ಪ್ರಚಾರ ನಡೆಸಲು ಹೆದರುತ್ತಿವೆ. ರಹಸ್ಯ ಮಾರ್ಗಗಳ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನ ಮಾಡುತ್ತಿವೆ. ಈ ಕಾರಣದಿಂದ ಮಣಿಪುರದಲ್ಲಿ ಈ ಬಾರಿ ಚುನಾವಣೆಯ ಉತ್ಸಾಹ ಕಾಣುತ್ತಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಇದೀಗ ಚುನಾವಣೆ ಬರುವಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರಚಾರಕ್ಕಾಗಿ ಇಂಫಾಲಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿತ್ತು. ಈ ನಡುವೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ.

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ಔಟರ್ ಮಣಿಪುರದ ಮಾಜಿ ಸಂಸದೆ ಕಿಮ್ ಗ್ಯಾಂಗ್ಟೆ ಮತ್ತು ದೆಹಲಿಯ ಕುಕಿ-ಝೋಮಿ ಮಹಿಳಾ ವೇದಿಕೆಯ ಮುಖಂಡರು ಸೇರಿದಂತೆ ಕುಕಿ-ಝೋ ಮಹಿಳೆಯರ ಗುಂಪು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು “ಗ್ಲೋಬಲ್ ಕುಕಿ-ಝೋಮಿ-ಹ್ಮಾರ್ ಮಹಿಳಾ ಸಮುದಾಯ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

“ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಸಾಂವಿಧಾನಿಕ ಮತ್ತು ಕಾನೂನುಬದ್ಧ ನಮ್ಮ ಹಕ್ಕನ್ನು ಚಲಾಯಿಸುತ್ತಿಲ್ಲ ಎಂದು ಭಾರವಾದ ಮನಸ್ಸಿನಿಂದ ತಿಳಿಸುತ್ತಿದ್ದೇವೆ. ಈ ನಿರ್ಧಾರ ಸುಮ್ಮನೆ ತೆಗೆದುಕೊಂಡಿಲ್ಲ. ಪ್ರಸ್ತುತ ಇರುವ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಿಂದ ನಾವು ನಂಬಿಕೆ ಕಳೆದುಕೊಂಡಿದ್ದೇವೆ ಮತ್ತು ಭ್ರಮನಿರಸನಗೊಂಡಿದ್ದೇವೆ” ಎಂದು ಕುಕಿ-ಝೋಮಿ ಮಹಿಳಾ ವೇದಿಕೆ ಸದಸ್ಯರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಚುರಾಚಂದ್‌ಪುರದ ಮೋಟ್‌ಬಂಗ್ ಪ್ರದೇಶದಲ್ಲಿ ಕುಕಿ-ಝೋ ನಾಗರಿಕ ಸಮಾಜ ಸಂಘಟನೆಗಳು ಮತ್ತು ಬುಡಕಟ್ಟು ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ. ಅಲ್ಲಿ ಸಾವಿರಾರು ಜನರು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು, ತಮ್ಮ ಇಬ್ಬರು ಗ್ರಾಮ ಸ್ವಯಂ ಸೇವಕರ ಅಮಾನವೀಯ ಹತ್ಯೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಡಕಟ್ಟು ಏಕತಾ ಸಮಿತಿಯು ಕಾಂಗ್‌ಪೋಕ್ಪಿ ಜಿಲ್ಲೆಯಾದ್ಯಂತ ಒಂದು ದಿನದ ಬಂದ್‌ಗೆ ಕರೆ ನೀಡಿದೆ. ಚುರಾಚಂದ್‌ಪುರದ ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಜಿಲ್ಲೆಯ ಡಿಸಿ ಕಚೇರಿ ಎದುರಿನ ಆಟದ ಮೈದಾನದಲ್ಲಿರುವ ‘ಸ್ಮರಣೆಯ ಗೋಡೆ’ (Wall of Remembrance) ಬಳಿ ಮೇಣದಬತ್ತಿ ಹೊತ್ತಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ, ಕೆಎಸ್‌ಒದ ದೆಹಲಿ ಎನ್‌ಸಿಆರ್ ಘಟಕ ಮತ್ತು ದೆಹಲಿಯ ಕುಕಿ-ಝೋ ಮಹಿಳಾ ವೇದಿಕೆ ಭಾನುವಾರ ಬೆಳಿಗ್ಗೆ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನೂರಾರು ಜನರು ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ‘ಬೀರೆನ್‌ ಸಿಂಗ್ ಬಹು ಜನಾಂಗೀಯ ರಾಜ್ಯವನ್ನು ಮುನ್ನಡೆಸಲು ಅಸಮರ್ಥರು’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಅವರು, “ಮಣಿಪುರದ ಕೇವಲ 10-15 ಮಂದಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದರು. ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವರಿಗೆ ಪೂರ್ವಾನುಮತಿ ಇಲ್ಲದ ಕಾರಣ, ಮೈದಾನದಿಂದ ಹೊರ ಹೋಗಿ ಪ್ರತಿಭಟನೆಗೆ ಅನುಮತಿ ಪಡೆಯುವಂತೆ ಅವರಿಗೆ ತಿಳಿಸಲಾಯಿತು. ಎಲ್ಲಾ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು” ಎಂದು ಹೇಳಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೂರಾರು ಜನರು ಕಪ್ಪು ಬಟ್ಟೆ ಧರಿಸಿ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿರುವುದು ಕಾಣಬಹುದು.

ಒಟ್ಟಿನಲ್ಲಿ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಇಬ್ಬರು ಸ್ವಯಂ ಸೇವಕರನ್ನು ಶನಿವಾರ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದನ್ನು ಖಂಡಿಸಿ ಮಣಿಪುರದ ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ ಮತ್ತು ದೆಹಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೆ, ಈ ವಿಚಾರ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿಲ್ಲ.

ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...