Homeಮುಖಪುಟಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ. ಚುನಾವಣೆ ಬಹಿಷ್ಕರಿಸಲು ನಿರ್ಧಾರ

- Advertisement -
- Advertisement -

ಶನಿವಾರ (ಏ.13) ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಕಿ ಸಮುದಾಯದ ಇಬ್ಬರು ‘ಗ್ರಾಮ ಸ್ವಯಂ ಸೇವಕರು’ ಕೊಲ್ಲಲ್ಪಟ್ಟಿದ್ದಾರೆ. ಇದನ್ನು ಖಂಡಿಸಿ ಮಣಿಪುರದ ಚುರಾಚಂದ್‌ಪುರ, ಕಾಂಗ್‌ಪೊಕ್ಪಿ ಜಿಲ್ಲೆಗಳಾದ್ಯಂತ ಮತ್ತು ನವ ದೆಹಲಿಯಲ್ಲಿ ಕುಕಿ-ಝೋ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ಎನ್‌ಸಿಆರ್‌ನಲ್ಲಿರುವ ಕುಕಿ ವಿದ್ಯಾರ್ಥಿಗಳ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ಸಂಘರ್ಷವನ್ನು ಶಮನಗೊಳಿಸುವುದಾಗಿ ಭರವಸೆ ನೀಡಬೇಕು ಎಂದು ಆಗ್ರಹಿಸಿದೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದು ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರದಲ್ಲಿ ಕುಕಿ-ಝೋ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನಾಕ್ರೋಶವಿರುವ ಕಾರಣ ರಾಜಕೀಯ ಪಕ್ಷಗಳು ಬೀದಿಗಿಳಿದು ಚುನಾವಣಾ ಪ್ರಚಾರ ನಡೆಸಲು ಹೆದರುತ್ತಿವೆ. ರಹಸ್ಯ ಮಾರ್ಗಗಳ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನ ಮಾಡುತ್ತಿವೆ. ಈ ಕಾರಣದಿಂದ ಮಣಿಪುರದಲ್ಲಿ ಈ ಬಾರಿ ಚುನಾವಣೆಯ ಉತ್ಸಾಹ ಕಾಣುತ್ತಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಇದೀಗ ಚುನಾವಣೆ ಬರುವಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರಚಾರಕ್ಕಾಗಿ ಇಂಫಾಲಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿತ್ತು. ಈ ನಡುವೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ.

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ಔಟರ್ ಮಣಿಪುರದ ಮಾಜಿ ಸಂಸದೆ ಕಿಮ್ ಗ್ಯಾಂಗ್ಟೆ ಮತ್ತು ದೆಹಲಿಯ ಕುಕಿ-ಝೋಮಿ ಮಹಿಳಾ ವೇದಿಕೆಯ ಮುಖಂಡರು ಸೇರಿದಂತೆ ಕುಕಿ-ಝೋ ಮಹಿಳೆಯರ ಗುಂಪು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು “ಗ್ಲೋಬಲ್ ಕುಕಿ-ಝೋಮಿ-ಹ್ಮಾರ್ ಮಹಿಳಾ ಸಮುದಾಯ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

“ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಸಾಂವಿಧಾನಿಕ ಮತ್ತು ಕಾನೂನುಬದ್ಧ ನಮ್ಮ ಹಕ್ಕನ್ನು ಚಲಾಯಿಸುತ್ತಿಲ್ಲ ಎಂದು ಭಾರವಾದ ಮನಸ್ಸಿನಿಂದ ತಿಳಿಸುತ್ತಿದ್ದೇವೆ. ಈ ನಿರ್ಧಾರ ಸುಮ್ಮನೆ ತೆಗೆದುಕೊಂಡಿಲ್ಲ. ಪ್ರಸ್ತುತ ಇರುವ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಿಂದ ನಾವು ನಂಬಿಕೆ ಕಳೆದುಕೊಂಡಿದ್ದೇವೆ ಮತ್ತು ಭ್ರಮನಿರಸನಗೊಂಡಿದ್ದೇವೆ” ಎಂದು ಕುಕಿ-ಝೋಮಿ ಮಹಿಳಾ ವೇದಿಕೆ ಸದಸ್ಯರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಚುರಾಚಂದ್‌ಪುರದ ಮೋಟ್‌ಬಂಗ್ ಪ್ರದೇಶದಲ್ಲಿ ಕುಕಿ-ಝೋ ನಾಗರಿಕ ಸಮಾಜ ಸಂಘಟನೆಗಳು ಮತ್ತು ಬುಡಕಟ್ಟು ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ. ಅಲ್ಲಿ ಸಾವಿರಾರು ಜನರು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು, ತಮ್ಮ ಇಬ್ಬರು ಗ್ರಾಮ ಸ್ವಯಂ ಸೇವಕರ ಅಮಾನವೀಯ ಹತ್ಯೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಡಕಟ್ಟು ಏಕತಾ ಸಮಿತಿಯು ಕಾಂಗ್‌ಪೋಕ್ಪಿ ಜಿಲ್ಲೆಯಾದ್ಯಂತ ಒಂದು ದಿನದ ಬಂದ್‌ಗೆ ಕರೆ ನೀಡಿದೆ. ಚುರಾಚಂದ್‌ಪುರದ ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಜಿಲ್ಲೆಯ ಡಿಸಿ ಕಚೇರಿ ಎದುರಿನ ಆಟದ ಮೈದಾನದಲ್ಲಿರುವ ‘ಸ್ಮರಣೆಯ ಗೋಡೆ’ (Wall of Remembrance) ಬಳಿ ಮೇಣದಬತ್ತಿ ಹೊತ್ತಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ, ಕೆಎಸ್‌ಒದ ದೆಹಲಿ ಎನ್‌ಸಿಆರ್ ಘಟಕ ಮತ್ತು ದೆಹಲಿಯ ಕುಕಿ-ಝೋ ಮಹಿಳಾ ವೇದಿಕೆ ಭಾನುವಾರ ಬೆಳಿಗ್ಗೆ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನೂರಾರು ಜನರು ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ‘ಬೀರೆನ್‌ ಸಿಂಗ್ ಬಹು ಜನಾಂಗೀಯ ರಾಜ್ಯವನ್ನು ಮುನ್ನಡೆಸಲು ಅಸಮರ್ಥರು’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಅವರು, “ಮಣಿಪುರದ ಕೇವಲ 10-15 ಮಂದಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದರು. ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವರಿಗೆ ಪೂರ್ವಾನುಮತಿ ಇಲ್ಲದ ಕಾರಣ, ಮೈದಾನದಿಂದ ಹೊರ ಹೋಗಿ ಪ್ರತಿಭಟನೆಗೆ ಅನುಮತಿ ಪಡೆಯುವಂತೆ ಅವರಿಗೆ ತಿಳಿಸಲಾಯಿತು. ಎಲ್ಲಾ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು” ಎಂದು ಹೇಳಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೂರಾರು ಜನರು ಕಪ್ಪು ಬಟ್ಟೆ ಧರಿಸಿ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿರುವುದು ಕಾಣಬಹುದು.

ಒಟ್ಟಿನಲ್ಲಿ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಇಬ್ಬರು ಸ್ವಯಂ ಸೇವಕರನ್ನು ಶನಿವಾರ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದನ್ನು ಖಂಡಿಸಿ ಮಣಿಪುರದ ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ ಮತ್ತು ದೆಹಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೆ, ಈ ವಿಚಾರ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿಲ್ಲ.

ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...