Homeಮುಖಪುಟಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಇಬ್ಬರು ಸ್ವಯಂ ಸೇವಕರ ಹತ್ಯೆ: ಮಣಿಪುರ, ದೆಹಲಿಯಲ್ಲಿ ಕುಕಿ-ಝೋ ಮಹಿಳೆಯರಿಂದ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ. ಚುನಾವಣೆ ಬಹಿಷ್ಕರಿಸಲು ನಿರ್ಧಾರ

- Advertisement -
- Advertisement -

ಶನಿವಾರ (ಏ.13) ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕುಕಿ ಸಮುದಾಯದ ಇಬ್ಬರು ‘ಗ್ರಾಮ ಸ್ವಯಂ ಸೇವಕರು’ ಕೊಲ್ಲಲ್ಪಟ್ಟಿದ್ದಾರೆ. ಇದನ್ನು ಖಂಡಿಸಿ ಮಣಿಪುರದ ಚುರಾಚಂದ್‌ಪುರ, ಕಾಂಗ್‌ಪೊಕ್ಪಿ ಜಿಲ್ಲೆಗಳಾದ್ಯಂತ ಮತ್ತು ನವ ದೆಹಲಿಯಲ್ಲಿ ಕುಕಿ-ಝೋ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ಎನ್‌ಸಿಆರ್‌ನಲ್ಲಿರುವ ಕುಕಿ ವಿದ್ಯಾರ್ಥಿಗಳ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ಸಂಘರ್ಷವನ್ನು ಶಮನಗೊಳಿಸುವುದಾಗಿ ಭರವಸೆ ನೀಡಬೇಕು ಎಂದು ಆಗ್ರಹಿಸಿದೆ.

ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದು ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರದಲ್ಲಿ ಕುಕಿ-ಝೋ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನಾಕ್ರೋಶವಿರುವ ಕಾರಣ ರಾಜಕೀಯ ಪಕ್ಷಗಳು ಬೀದಿಗಿಳಿದು ಚುನಾವಣಾ ಪ್ರಚಾರ ನಡೆಸಲು ಹೆದರುತ್ತಿವೆ. ರಹಸ್ಯ ಮಾರ್ಗಗಳ ಮೂಲಕ ಮತದಾರರನ್ನು ಓಲೈಸುವ ಪ್ರಯತ್ನ ಮಾಡುತ್ತಿವೆ. ಈ ಕಾರಣದಿಂದ ಮಣಿಪುರದಲ್ಲಿ ಈ ಬಾರಿ ಚುನಾವಣೆಯ ಉತ್ಸಾಹ ಕಾಣುತ್ತಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

ಕಳೆದ ಒಂದು ವರ್ಷದಿಂದ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಒಂದು ಬಾರಿಯೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಇದೀಗ ಚುನಾವಣೆ ಬರುವಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರಚಾರಕ್ಕಾಗಿ ಇಂಫಾಲಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿತ್ತು. ಈ ನಡುವೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ಭುಗಿಲೆದ್ದಿವೆ.

ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ಔಟರ್ ಮಣಿಪುರದ ಮಾಜಿ ಸಂಸದೆ ಕಿಮ್ ಗ್ಯಾಂಗ್ಟೆ ಮತ್ತು ದೆಹಲಿಯ ಕುಕಿ-ಝೋಮಿ ಮಹಿಳಾ ವೇದಿಕೆಯ ಮುಖಂಡರು ಸೇರಿದಂತೆ ಕುಕಿ-ಝೋ ಮಹಿಳೆಯರ ಗುಂಪು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು “ಗ್ಲೋಬಲ್ ಕುಕಿ-ಝೋಮಿ-ಹ್ಮಾರ್ ಮಹಿಳಾ ಸಮುದಾಯ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

“ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಸಾಂವಿಧಾನಿಕ ಮತ್ತು ಕಾನೂನುಬದ್ಧ ನಮ್ಮ ಹಕ್ಕನ್ನು ಚಲಾಯಿಸುತ್ತಿಲ್ಲ ಎಂದು ಭಾರವಾದ ಮನಸ್ಸಿನಿಂದ ತಿಳಿಸುತ್ತಿದ್ದೇವೆ. ಈ ನಿರ್ಧಾರ ಸುಮ್ಮನೆ ತೆಗೆದುಕೊಂಡಿಲ್ಲ. ಪ್ರಸ್ತುತ ಇರುವ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಿಂದ ನಾವು ನಂಬಿಕೆ ಕಳೆದುಕೊಂಡಿದ್ದೇವೆ ಮತ್ತು ಭ್ರಮನಿರಸನಗೊಂಡಿದ್ದೇವೆ” ಎಂದು ಕುಕಿ-ಝೋಮಿ ಮಹಿಳಾ ವೇದಿಕೆ ಸದಸ್ಯರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಚುರಾಚಂದ್‌ಪುರದ ಮೋಟ್‌ಬಂಗ್ ಪ್ರದೇಶದಲ್ಲಿ ಕುಕಿ-ಝೋ ನಾಗರಿಕ ಸಮಾಜ ಸಂಘಟನೆಗಳು ಮತ್ತು ಬುಡಕಟ್ಟು ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ. ಅಲ್ಲಿ ಸಾವಿರಾರು ಜನರು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು, ತಮ್ಮ ಇಬ್ಬರು ಗ್ರಾಮ ಸ್ವಯಂ ಸೇವಕರ ಅಮಾನವೀಯ ಹತ್ಯೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಡಕಟ್ಟು ಏಕತಾ ಸಮಿತಿಯು ಕಾಂಗ್‌ಪೋಕ್ಪಿ ಜಿಲ್ಲೆಯಾದ್ಯಂತ ಒಂದು ದಿನದ ಬಂದ್‌ಗೆ ಕರೆ ನೀಡಿದೆ. ಚುರಾಚಂದ್‌ಪುರದ ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಜಿಲ್ಲೆಯ ಡಿಸಿ ಕಚೇರಿ ಎದುರಿನ ಆಟದ ಮೈದಾನದಲ್ಲಿರುವ ‘ಸ್ಮರಣೆಯ ಗೋಡೆ’ (Wall of Remembrance) ಬಳಿ ಮೇಣದಬತ್ತಿ ಹೊತ್ತಸಿ ಆಹೋರಾತ್ರಿ ಪ್ರತಿಭಟನೆ ನಡೆಸಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ, ಕೆಎಸ್‌ಒದ ದೆಹಲಿ ಎನ್‌ಸಿಆರ್ ಘಟಕ ಮತ್ತು ದೆಹಲಿಯ ಕುಕಿ-ಝೋ ಮಹಿಳಾ ವೇದಿಕೆ ಭಾನುವಾರ ಬೆಳಿಗ್ಗೆ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನೂರಾರು ಜನರು ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ‘ಬೀರೆನ್‌ ಸಿಂಗ್ ಬಹು ಜನಾಂಗೀಯ ರಾಜ್ಯವನ್ನು ಮುನ್ನಡೆಸಲು ಅಸಮರ್ಥರು’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಅವರು, “ಮಣಿಪುರದ ಕೇವಲ 10-15 ಮಂದಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಜಮಾಯಿಸಿದ್ದರು. ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವರಿಗೆ ಪೂರ್ವಾನುಮತಿ ಇಲ್ಲದ ಕಾರಣ, ಮೈದಾನದಿಂದ ಹೊರ ಹೋಗಿ ಪ್ರತಿಭಟನೆಗೆ ಅನುಮತಿ ಪಡೆಯುವಂತೆ ಅವರಿಗೆ ತಿಳಿಸಲಾಯಿತು. ಎಲ್ಲಾ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದರು” ಎಂದು ಹೇಳಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನೂರಾರು ಜನರು ಕಪ್ಪು ಬಟ್ಟೆ ಧರಿಸಿ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿರುವುದು ಕಾಣಬಹುದು.

ಒಟ್ಟಿನಲ್ಲಿ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಇಬ್ಬರು ಸ್ವಯಂ ಸೇವಕರನ್ನು ಶನಿವಾರ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದನ್ನು ಖಂಡಿಸಿ ಮಣಿಪುರದ ಕಾಂಗ್‌ಪೋಕ್ಪಿ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ ಮತ್ತು ದೆಹಲಿಯಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೆ, ಈ ವಿಚಾರ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿಲ್ಲ.

ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕಣಕ್ಕಿಳಿದ ಕನ್ಹಯ್ಯಾ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...