Homeಮುಖಪುಟಸೂರತ್‌ನಲ್ಲಿ ವಲಸೆ ಕಾರ್ಮಿಕರಿಂದ ಪ್ರತಿಭಟನೆ; ಪೊಲೀಸರಿಂದ ಆಶ್ರುವಾಯು ಸಿಡಿತ

ಸೂರತ್‌ನಲ್ಲಿ ವಲಸೆ ಕಾರ್ಮಿಕರಿಂದ ಪ್ರತಿಭಟನೆ; ಪೊಲೀಸರಿಂದ ಆಶ್ರುವಾಯು ಸಿಡಿತ

- Advertisement -
- Advertisement -

ಮನೆಗೆ ತಲುಪಲಾಗದೆ ಹತಾಶರಾಗಿದ್ದ ವಲಸೆ ಕಾರ್ಮಿಕರ ಗುಂಪು ಗುಜರಾತಿನ ಸೂರತ್‌ನಲ್ಲಿ ಆಕ್ರೋಶಗೊಂಡು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ.

ಗುಜರಾತಿನ ಸೂರತ್ ನ ಕೊಡೊದರ, ವರೇಲಿಯ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆಯುತ್ತಿದೆ ಎಂದು ವರದಿಯಾಗುತ್ತಿದೆ. ಟ್ರಾವೆಲ್ ಪಾಸ್ ಗಳನ್ನು ಅನುಮತಿಸಿದರೂ, ಅಧಿಕಾರಿಗಳ ಅಸಮರ್ಥ ನಿರ್ವಹಣೆಯಿಂದಾಗಿ ವಲಸೆ ಕಾರ್ಮಿಕರು ನಿರಾಶೆಗೊಂಡಿದ್ದಾರೆ ಎಂದು ವರದಿಯಾಗಿದೆ.

ಆಕ್ರೋಶಗೊಂಡ ಕಾರ್ಮಿಕರು ಬೀದಿಯಲ್ಲಿ ಜಮಾಯಿಸಿ, ಗುಂಪಾಗಿ ನಿಂತು ಘೋಷಣೆ ಕೂಗತೊಡಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ವಲಸಿಗರು ಕಲ್ಲುಗಳನ್ನು ಎತ್ತಿಕೊಂಡು ಎಸೆಯುವ ಹಲವಾರು ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡುತ್ತಿದೆ.

ಕಾರ್ಮಿಕರು ತಮ್ಮ ಊರಿಗೆ ಹಿಂತಿರುಗಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ಹಲವಾರು ಜನ ಹೇಳುತ್ತಿದ್ದಾರೆ.

ಏಪ್ರಿಲ್ 28 ರಂದು ಕೂಡಾ ಸೂರತ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಯತ್ನಿಸುತ್ತಿದ್ದ ಭದ್ರತಾ ಸಿಬ್ಬಂದಿಯ ಮೇಲೆ ಕೆಲವು ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ, ಕಾರ್ಮಿಕರು ಡೈಮಂಡ್ ಬೋರ್ಸ್‌ನ ಕಚೇರಿಗೆ ಕಲ್ಲು ಎಸೆಯಲಾಗಿತ್ತು.

ಕಾರ್ಮಿಕ ದಿನವಾದ ಮೇ 1 ರಂದು, ಸಿಕ್ಕಿಕೊಂಡ ವಲಸಿಗರು, ವಿದ್ಯಾರ್ಥಿಗಳು ಇತ್ಯಾದಿಗಳನ್ನು ತಮ್ಮ ಮನೆಗಳಿಗೆ ಕರೆದೊಯ್ಯಲು ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತಾದರೂ, ವಲಸಿಗರಿಂದಲೇ ಶುಲ್ಕ ವಿಧಿಸುವ ಕೇಂದ್ರದ ನೀತಿಯನ್ನು ಪ್ರತಿಪಕ್ಷಗಳು ಟೀಕೆ ಮಾಡಿವೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ


ವಿಡಿಯೊ ನೋಡಿ: ಕೊರೊನಾದ ಜೊತೆಗೂ ಮೂರ್ಖತನವನ್ನೂ ಓಡಿಸೋಣ; ಮಾನವೀಯತೆಯನ್ನಲ್ಲ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...