Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...