Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...