Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...