Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...