Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...