Homeಕರ್ನಾಟಕರೈತರ ಮೇಲಿನ ಹಲ್ಲೆ ವಿರೋಧಿಸಿ ’ಐಕ್ಯ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ರೈತರ ಮೇಲಿನ ಹಲ್ಲೆ ವಿರೋಧಿಸಿ ’ಐಕ್ಯ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಹಾಗೂ ರೈತರ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಮುಂದೆ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ ಅವರು ಮಾತನಾಡಿ, “ದೇಶದಾದ್ಯಂತ ರೈತರು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರವೆ ಅಲ್ಲಿ ಕೋಟಿಗಿಂತಲೂ ಹೆಚ್ಚು ಪ್ರತಿಭಟನಾಕಾರರು ಸೇರಿದ್ದಾರೆ ಎಂದು ಹೇಳುತ್ತಿದೆ. ಈ ಕಾಯ್ದೆಯ ವಿರುದ್ದ ಕರ್ನಾಟಕದಲ್ಲಿಯು ಮುಂದಿನ ದಿನಗಳಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ” ಎಂದರು.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ಎಐಪಿಎಫ್ ನಾಯಕರಾದ ಮಣಿ ಪಿಆರ್‌‌ಎಸ್‌ ಅವರು ಮಾತನಾಡಿ, “ಈ ಸರ್ಕಾರ ಇರುವುದು ಅಂಬಾನಿ-ಅದಾನಿಗಳ ಪರವಾಗಿ ಕಾನೂನು ಸೃಷ್ಟಿ ಮಾಡಲು ಮಾತ್ರ. ರೈತರ ಹೊಟ್ಟೆಗೆ ಹೊಡೆಯುತ್ತಿರುವ ಈ ಸರ್ಕಾರಕ್ಕೆ ತಮ್ಮ ಆಹಾರ ಹೇಗೆ ಸಿಗುತ್ತಿದೆ ಎಂದು ತಿಳಿದಿಲ್ಲ. ಜಂತರ್‌ ಮಂತರ್‌ನಲ್ಲಿ ತಮಗೆ ಪ್ರತಿಭಟನೆ ಮಾಡಬೇಕು ಎಂದು ರೈತರು ಕೇಳುತ್ತಿದ್ದಾರೆ. ಆದರೆ ಅದಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ ಅವರ ಮೇಲೆಯೆ ದಬ್ಬಾಳಿಕೆ ಮಾಡುತ್ತಿದೆ. ಈ ಹಿಂದೆ ಕೂಡಾ ರೈತರ ಮೇಲೆ ದಬ್ಬಾಳಿಕೆ ಮಾಡಿರುವ ಸರ್ಕಾರ ಏನಾಗಿದೆ ಎಂದು ನಮಗೆ ತಿಳಿದಿದೆ. ರೈತರ ಸಿಟ್ಟನ್ನು ಮೈಮೇಲೆ ಎಳೆದು ಕೊಳ್ಳದಿರಿ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!
ರೈತ ಸಂಘದ ನಾರಾಯಣ ಸ್ವಾಮಿ ಮಾತನಾಡಿ, “ಮತ ನೀಡಿ ಕೇಂದ್ರಕ್ಕೆ ಸಂಸದರನ್ನು ಕಳುಹಿಸಿದ್ದು ನಮ್ಮದೆ ತಪ್ಪು. ಇಂದು ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆ ಘೋಷಿಸಿದೆ, ಈ ಚುನಾವಣೆಯಲ್ಲಿ ಗ್ರಾಮಿಣ ಮಟ್ಟದಿಂದಲೇ ಇವರನ್ನು ಸೋಲಿಸುವ ತೀರ್ಮಾನ ಮಾಡಬೇಕು” ಎಂದು ಕರೆ ನೀಡಿದರು.

ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಕೇಂದ್ರ ಸರ್ಕಾರವು ನಡೆಸಿಕೊಳ್ಳುತ್ತಿರುವ ರೀತಿಗೆ ಹಾಗೂ ಹೊಸ ರೈತ ವಿರೋಧಿ ನೀತಿಯ ವಿರುದ್ದ ಪ್ರತಿಭಟನಾಕಾರರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....