Homeಕರ್ನಾಟಕರೈತರ ಮೇಲಿನ ಹಲ್ಲೆ ವಿರೋಧಿಸಿ ’ಐಕ್ಯ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

ರೈತರ ಮೇಲಿನ ಹಲ್ಲೆ ವಿರೋಧಿಸಿ ’ಐಕ್ಯ ಹೋರಾಟ ಸಮಿತಿ’ಯಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಹಾಗೂ ರೈತರ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಮುಂದೆ ರೈತ-ದಲಿತ-ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ ಅವರು ಮಾತನಾಡಿ, “ದೇಶದಾದ್ಯಂತ ರೈತರು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರವೆ ಅಲ್ಲಿ ಕೋಟಿಗಿಂತಲೂ ಹೆಚ್ಚು ಪ್ರತಿಭಟನಾಕಾರರು ಸೇರಿದ್ದಾರೆ ಎಂದು ಹೇಳುತ್ತಿದೆ. ಈ ಕಾಯ್ದೆಯ ವಿರುದ್ದ ಕರ್ನಾಟಕದಲ್ಲಿಯು ಮುಂದಿನ ದಿನಗಳಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ” ಎಂದರು.

ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ಎಐಪಿಎಫ್ ನಾಯಕರಾದ ಮಣಿ ಪಿಆರ್‌‌ಎಸ್‌ ಅವರು ಮಾತನಾಡಿ, “ಈ ಸರ್ಕಾರ ಇರುವುದು ಅಂಬಾನಿ-ಅದಾನಿಗಳ ಪರವಾಗಿ ಕಾನೂನು ಸೃಷ್ಟಿ ಮಾಡಲು ಮಾತ್ರ. ರೈತರ ಹೊಟ್ಟೆಗೆ ಹೊಡೆಯುತ್ತಿರುವ ಈ ಸರ್ಕಾರಕ್ಕೆ ತಮ್ಮ ಆಹಾರ ಹೇಗೆ ಸಿಗುತ್ತಿದೆ ಎಂದು ತಿಳಿದಿಲ್ಲ. ಜಂತರ್‌ ಮಂತರ್‌ನಲ್ಲಿ ತಮಗೆ ಪ್ರತಿಭಟನೆ ಮಾಡಬೇಕು ಎಂದು ರೈತರು ಕೇಳುತ್ತಿದ್ದಾರೆ. ಆದರೆ ಅದಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ ಅವರ ಮೇಲೆಯೆ ದಬ್ಬಾಳಿಕೆ ಮಾಡುತ್ತಿದೆ. ಈ ಹಿಂದೆ ಕೂಡಾ ರೈತರ ಮೇಲೆ ದಬ್ಬಾಳಿಕೆ ಮಾಡಿರುವ ಸರ್ಕಾರ ಏನಾಗಿದೆ ಎಂದು ನಮಗೆ ತಿಳಿದಿದೆ. ರೈತರ ಸಿಟ್ಟನ್ನು ಮೈಮೇಲೆ ಎಳೆದು ಕೊಳ್ಳದಿರಿ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!
ರೈತ ಸಂಘದ ನಾರಾಯಣ ಸ್ವಾಮಿ ಮಾತನಾಡಿ, “ಮತ ನೀಡಿ ಕೇಂದ್ರಕ್ಕೆ ಸಂಸದರನ್ನು ಕಳುಹಿಸಿದ್ದು ನಮ್ಮದೆ ತಪ್ಪು. ಇಂದು ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆ ಘೋಷಿಸಿದೆ, ಈ ಚುನಾವಣೆಯಲ್ಲಿ ಗ್ರಾಮಿಣ ಮಟ್ಟದಿಂದಲೇ ಇವರನ್ನು ಸೋಲಿಸುವ ತೀರ್ಮಾನ ಮಾಡಬೇಕು” ಎಂದು ಕರೆ ನೀಡಿದರು.

ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಕೇಂದ್ರ ಸರ್ಕಾರವು ನಡೆಸಿಕೊಳ್ಳುತ್ತಿರುವ ರೀತಿಗೆ ಹಾಗೂ ಹೊಸ ರೈತ ವಿರೋಧಿ ನೀತಿಯ ವಿರುದ್ದ ಪ್ರತಿಭಟನಾಕಾರರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...