Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...