Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...