Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...