Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...