Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...