Homeಮುಖಪುಟಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

ಮಿಜೋರಾಂನಲ್ಲಿ ಬುಡಕಟ್ಟು ಜನಾಂಗದಿಂದ ಪ್ರತಿಭಟನೆ: ಮೋದಿ, ಬಿರೇನ್ ಸಿಂಗ್ ಪ್ರತಿಕೃತಿ ಸುಟ್ಟು ಆಕ್ರೋಶ

- Advertisement -
- Advertisement -

ಮಿಜೋರಾಂನಲ್ಲಿ ಬುಧವಾರ ಐಜ್ವಾಲ್‌ನಲ್ಲಿ ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ (ZORO) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿದ್ದಾರೆ.

ಮಣಿಪುರದಲ್ಲಿ ಝೋ ಬುಡಕಟ್ಟು ಜನಾಂಗದವರ ಒಗ್ಗಟ್ಟು ಪ್ರದರ್ಶಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮೋದಿ ಹಾಗೂ ಬಿರೇನ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಲಾಯಿತು.

ಸುಮಾರು 300 ಜನರು ಮಣಿಪುರ ಸಿಎಂ ಬಿರೇನ್ ಸಿಂಗ್, ಪ್ರಧಾನಿ ಮೋದಿ ಮತ್ತು ಡೇವಿಡ್ ಥೀಕ್ ಕೊಲೆಗಾರನ ಪ್ರತಿಕೃತಿಯನ್ನು ಸುಟ್ಟಿದ್ದಾರೆ. ನೆರೆಯ ರಾಜ್ಯ ಮಣಿಪುರದಲ್ಲಿ ತಮ್ಮ ಸಹವರ್ತಿ ಬುಡಕಟ್ಟು ಜನಾಂಗದವರಿಗೆ ಬೆಂಬಲ ಸೂಚಿಸಲು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜನರ ಸಾಮೂಹಿಕ ಆಕ್ರೋಶದ ಸಂಕೇತವಾಗಿ ರಾಜ್ಯ ನಾಯಕರ ಪ್ರತಿಕೃತಿಗಳಿಗೂ ಬೆಂಕಿ ಇಡಲಾಯಿತು.

ZORO ಎನ್ನುವ ಜನಪ್ರಿಯ ಸಂಸ್ಥೆಯು ಈ ಹಿಂದೆ ಮೇ ಕೊನೆಯ ವಾರದಲ್ಲಿ ರ್ಯಾಲಿಯನ್ನು ಆಯೋಜಿಸಿತ್ತು. ಈ ವೇಳೆ ಅವರು ಜನಾಂಗೀಯ ಝೋ ಬುಡಕಟ್ಟುಗಳನ್ನು ಶಾಂತಿಯುತ ವಿಧಾನಗಳ ಮೂಲಕ ಒಂದು ಆಡಳಿತಾತ್ಮಕ ಸೆಟಪ್ ಅಡಿಯಲ್ಲಿ ತರಲು ಝೋ ಬುಡಕಟ್ಟುಗಳ ಮರು-ಏಕೀಕರಣಕ್ಕಾಗಿ ಕ್ರಮಗಳನ್ನು ತಗೆದುಕೊಳ್ಳುವ ಹಲವಾರು ನಿರ್ಣಯಗಳನ್ನು ಅಂಗೀಕರಿಸಿದರು.

ಬುಧವಾರ ರ್ಯಾಲಿಯಲ್ಲಿ ಮೂರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿರ್ಣಯವೆಂದರೆ, ”ಮಣಿಪುರದಲ್ಲಿ ತಮ್ಮ ಜೀವ, ಆಸ್ತಿ, ಜೀವನೋಪಾಯಗಳನ್ನು ಕಳೆದುಕೊಂಡಿರುವ ತಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದು, ಅವರ ಉಳಿವಿಗಾಗಿ ಹೋರಾಟ ಮಾಡುವುದು ಮತ್ತು ಪ್ರತ್ಯೇಕ ಆಡಳಿತದ ಬೇಡಿಕೆ ಇರಿಸುವುದಾಗಿದೆ.

ಎರಡನೆಯದು, ”ಮಣಿಪುರದಲ್ಲಿ ಝೋ ಜನಾಂಗೀಯ ಜನರಿಗೆ ಪ್ರತ್ಯೇಕ ಆಡಳಿತವನ್ನು ನೀಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡುವುದು. ಅದರ ಮೂರನೇ ನಿರ್ಣಯವು ಪ್ರಪಂಚದಾದ್ಯಂತ ಝೋ ಜನಾಂಗೀಯ ಜನರ ಏಕತೆಯ ಕಡೆಗೆ ಕೆಲಸ ಮಾಡುವುದು.”

ರ್ಯಾಲಿಯಲ್ಲಿ, ZORO ಅಧ್ಯಕ್ಷ ಆರ್. ಸಾಂಗ್ಕಾವಿಯಾ ಅವರು, ”ಕುಕಿ ಬುಡಕಟ್ಟು ಜನಾಂಗದವರನ್ನು ಮಣಿಪುರದ ರಾಜ್ಯ ನಾಯಕರು ನಿರ್ಲಕ್ಷಿಸಿರುವ ವಿವಿಧ ವಿಧಾನಗಳನ್ನು ಎತ್ತಿ ತೋರಿಸಿದರು. ಈ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿರುವುದನ್ನು ಪ್ರಶ್ನಿಸಿದರು. ”ಭಾರತವು ಝೋ ಜನರನ್ನು ವಿದೇಶಿಯರಂತೆ ಪರಿಗಣಿಸುತ್ತದೆಯೇ ಅದು ನಮ್ಮನ್ನು ಈ ಮಟ್ಟಿಗೆ ನಿರ್ಲಕ್ಷಿಸಿದೆಯೇ?” ಎಂದು ಅಮಸಧಾನ ಹೊರಹಾಕಿದರು.

ಝೋ ರಿಯೂನಿಫಿಕೇಶನ್ ಆರ್ಗನೈಸೇಶನ್ ರೆಫ್ಯೂಜಿಯ ಕಾರ್ಯದರ್ಶಿ ರಿನಿ ರಾಲ್ಟೆ ಕೂಡ ಕೇಂದ್ರ ಸರ್ಕಾರದ ಮೌನವನ್ನು ಪ್ರಶ್ನಿಸಿದ್ದಾರೆ. ”ಕೇಂದ್ರ ಸರ್ಕಾರದ ಮೌನಕ್ಕಾಗಿ ನಮ್ಮ ಕೋಪವನ್ನು ವ್ಯಕ್ತಪಡಿಸಲು ನಾವು ಒಟ್ಟಾಗಿ ಬರುತ್ತಿದ್ದೇವೆ” ಎಂದು ತಿಳಿಸಿದರು.

”ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಬೇಕಿತ್ತು, ಅವರ ಒಂದು ಸಮಾಧಾನದ ಮಾತು ಶಾಂತಿಯನ್ನು ತರಬಹುದು, ಅವರು ಇಲ್ಲಿಯವರೆಗೆ ಏಕೆ ಮಾತನಾಡುತ್ತಿಲ್ಲ? ಅವರಿಗೆ ಧ್ವನಿ ಇಲ್ಲ, ಬಾಯಿ ಇಲ್ಲ, ಜವಾಬ್ದಾರಿಯನ್ನು ನಿರ್ವಹಿಸಲು ಬೆನ್ನುಮೂಳೆ ಇಲ್ಲ, ಆದ್ದರಿಂದ ನಾವು ಇಂದು ಐಜ್ವಾಲ್‌ನಲ್ಲಿ ZORO ಆಗಿ ಮಣಿಪುರದ ನಮ್ಮ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ಒಗ್ಗೂಡುತ್ತಿದ್ದೇವೆ” ಎಂದರು.

ಈ ಬುಡಕಟ್ಟು ಜನರು ಪ್ರತ್ಯೇಕ ಆಡಳಿತವನ್ನು ಹೊಂದಲು ತಮ್ಮ ಹಕ್ಕಿಗಾಗಿ ಮಾತ್ರ ಒತ್ತಾಯಿಸುತ್ತಿದ್ದಾರೆ ಎಂದು ರಾಲ್ಟರ್ ಹೇಳಿದರು. ಮೈತಿ ಸಮುದಾಯವು ಇನ್ನು ಮುಂದೆ ಆದಿವಾಸಿಗಳಿಂದಿಗೆ ಹೊಂದಾಣಿಕೆಯಿಂದ ಇರುವುದಿಲ್ಲ, ಹಾಗಿದ್ದಾರೆ ಒಟ್ಟಿಗೆ ಇರುವುದರಲ್ಲಿ ಅರ್ಥವೇನಿದೆ? ಪ್ರತ್ಯೇಕತೆ ಅವರಿಗೆ ಇರುವ ಏಕೈಕ ಆಯ್ಕೆಯಾಗಿದೆ” ಎಂದು ರಾಲ್ಟೆ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಮೌನವಾಗಿರುವುದನ್ನು ಪ್ರದರ್ಶಿಸಲು ಪ್ರಧಾನ ಮಂತ್ರಿಯ ಪ್ರತಿಕೃತಿಯಲ್ಲಿ ಅವರ ತುಟಿಗಳ ಮೇಲೆ ಟೇಪ್‌ ಅಂಟಿಸಿ ಗುರುತಿಸಲಾಗಿತ್ತು. ಏಕೆಂದರೆ ಇದು ಪ್ರಧಾನಿಯ ಮೌನದ ಸಂಕೇತವಾಗಿತ್ತು.

ಇನ್ನು ಮಣಿಪುರ ಮುಖ್ಯಮಂತ್ರಿ ಸಿಂಗ್ ಪ್ರತಿಕೃತಿಗೆ “ಮಾಫಿಯಾ ಗಾಡ್‌ಫಾದರ್” ಎಂಬ ಬಿರುದನ್ನು ನೀಡಲಾಯಿತು. ಸಿಂಗ್ ಅವರ ಪ್ರತಿಕೃತಿ ದಹನವು “ಅವರು ಸಾಯಲು ಅರ್ಹರು” ಎಂಬ ಪ್ರದರ್ಶನವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಪ್ರತಿಕೃತಿಗೆ ಬೆಂಕಿ ಇಡುತ್ತಿದಂತೆಯೇ ಮೋದಿ ಹಾಗೂ ಸಿಂಗ್ ವಿರುದ್ಧ ಮಣಿಪುರಿ ಭಾಷೆಯಲ್ಲಿ ಶಾಪಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ZORO ಹಂಚಿಕೊಂಡ ಮಾಹಿತಿಯ ಪ್ರಕಾರ, ಮಣಿಪುರದಲ್ಲಿ ಸಾವಿನ ಸಂಖ್ಯೆ 124ಕ್ಕಿಂತ ಹೆಚ್ಚಾಗಿದೆ. 60 ಕಾಣೆಯಾಗಿದ್ದಾರೆ, ಬುಡಕಟ್ಟು ಸಂಸ್ಥೆಯ ಪ್ರಕಾರ 290 ಹಳ್ಳಿಗಳನ್ನು ಸುಡಲಾಗಿದೆ. 357 ಚರ್ಚ್‌ಗಳು ಮತ್ತು ಕ್ವಾರ್ಟರ್‌ಗಳು ಸುಟ್ಟುಹೋಗಿವೆ ಮತ್ತು ಸುಮಾರು 41,425 ಜನರು ಸ್ಥಳಾಂತರಗೊಂಡಿದ್ದಾರೆ.ಇ

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...