Homeದಲಿತ್ ಫೈಲ್ಸ್‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಇತ್ತೀಚೆಗೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು.

- Advertisement -
- Advertisement -

ಉತ್ತರಾಖಂಡದ ದಲಿತ ವಿದ್ಯಾರ್ಥಿಗಳ ಗುಂಪೊಂದು ಮೇಲ್ಜಾತಿ ಹಿಂದೂ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿದ್ದಾರೆ. ಈ ಹಿಂದೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಉತ್ತರಾಖಂಡ್‌ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್‌ನ ಸರ್ಕಾರಿ ಇಂಟರ್ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ, ದಲಿತ ಸಮುದಾಯಕ್ಕೆ ಸೇರಿದ ಸುನೀತಾ ದೇವಿ ಅವರು ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಆದರೆ ಗಾಯಕ್ಕೆ ಉಪ್ಪು ಸವರಿದ್ದ ರಾಜ್ಯ ಸರ್ಕಾರ ಸುನೀತಾ ದೇವಿ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಆದರೆ, ದಲಿತ ಸಮುದಾಯಕ್ಕೆ ಸೇರಿದ 23 ವಿದ್ಯಾರ್ಥಿಗಳು ಸುನಿತಾ ದೇವಿಯ ಬದಲಿಯಾಗಿ ನೇಮಕಗೊಂಡ ಮೇಲ್ಜಾತಿ ಹಿಂದೂ ಮಹಿಳೆ ವಿಮಿಲೇಶ್ ಉಪ್ರೇತಿ ಅವರು ತಯಾರಿಸಿದ ಊಟವನ್ನು ತಿನ್ನಲು ನಿರಾಕರಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಶುಕ್ರವಾರದಂದು ಮಧ್ಯಾಹ್ನದ ಊಟವನ್ನು ಬಡಿಸುತ್ತಿರುವಾಗ, 23 ದಲಿತ ವಿದ್ಯಾರ್ಥಿಗಳು ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ. “ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದರೆ, ಮೇಲ್ಜಾತಿಯ ಮಹಿಳೆ ತಯಾರಿಸಿದ ಊಟವನ್ನು ನಾವು ಬಹಿಷ್ಕರಿಸುವುದಾಗಿ ಅವರು ಹೇಳಿದರು” ಎಂದು ಇಂಟರ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ಬಗ್ಗೆ ಉತ್ತರಾಖಂಡ ಸರ್ಕಾರದ ವಿರುದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ನಂತರ ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಚಂದ್ರಶೇಖರ್‌‌, “ಉತ್ತರಾಖಂಡ್‌ನ ಚಂಪಾವತ್ ಜಿಲ್ಲೆಯಲ್ಲಿ ಎಸ್‌ಸಿ ಸಮುದಾಯದ ಅಡುಗೆಯ ಮಹಿಳೆಯನ್ನು ವಜಾ ಮಾಡುವ ಮೂಲಕ ಸರ್ಕಾರ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಅವಮಾನ ಮಾಡಿದೆ. ನಮ್ಮ ಪಕ್ಷ ಮತ್ತು ಭೀಮ್ ಆರ್ಮಿ ತಮ್ಮ ತಾಯಂದಿರ ಮತ್ತು ಸಹೋದರಿಯರ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆಕೆಯನ್ನು ಮತ್ತೇ ಹುದ್ದೆಗೆ ಸೇರಿಸಿಕೊಳ್ಳದಿದ್ದರೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ವಿರುದ್ದ ಘೋರ ಹೋರಾಟ ಮಾಡುತ್ತೇವೆ. ಸ್ನೇಹಿತರೇ, ಪ್ರತಿಭಟನೆಗೆ ತಯಾರಿ ಆರಂಭಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲಾಯಕ್ ಮುಖ್ಯಮ್ಂತ್ರಿ ಅವನು. ಮಕ್ಕಳು ಮೇಲ್ಜಾತಿಯವರಿಗೆ ಸರಿಯಾಗಿ ಬುದ್ದಿ ಕಲಿಸ್ತಿದ್ದಾರೆ. ಜೈ ಭೀಮ್‌ಆರ್ಮಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...