Homeದಲಿತ್ ಫೈಲ್ಸ್‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಇತ್ತೀಚೆಗೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು.

- Advertisement -
- Advertisement -

ಉತ್ತರಾಖಂಡದ ದಲಿತ ವಿದ್ಯಾರ್ಥಿಗಳ ಗುಂಪೊಂದು ಮೇಲ್ಜಾತಿ ಹಿಂದೂ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿದ್ದಾರೆ. ಈ ಹಿಂದೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಉತ್ತರಾಖಂಡ್‌ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್‌ನ ಸರ್ಕಾರಿ ಇಂಟರ್ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ, ದಲಿತ ಸಮುದಾಯಕ್ಕೆ ಸೇರಿದ ಸುನೀತಾ ದೇವಿ ಅವರು ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಆದರೆ ಗಾಯಕ್ಕೆ ಉಪ್ಪು ಸವರಿದ್ದ ರಾಜ್ಯ ಸರ್ಕಾರ ಸುನೀತಾ ದೇವಿ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಆದರೆ, ದಲಿತ ಸಮುದಾಯಕ್ಕೆ ಸೇರಿದ 23 ವಿದ್ಯಾರ್ಥಿಗಳು ಸುನಿತಾ ದೇವಿಯ ಬದಲಿಯಾಗಿ ನೇಮಕಗೊಂಡ ಮೇಲ್ಜಾತಿ ಹಿಂದೂ ಮಹಿಳೆ ವಿಮಿಲೇಶ್ ಉಪ್ರೇತಿ ಅವರು ತಯಾರಿಸಿದ ಊಟವನ್ನು ತಿನ್ನಲು ನಿರಾಕರಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಶುಕ್ರವಾರದಂದು ಮಧ್ಯಾಹ್ನದ ಊಟವನ್ನು ಬಡಿಸುತ್ತಿರುವಾಗ, 23 ದಲಿತ ವಿದ್ಯಾರ್ಥಿಗಳು ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ. “ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದರೆ, ಮೇಲ್ಜಾತಿಯ ಮಹಿಳೆ ತಯಾರಿಸಿದ ಊಟವನ್ನು ನಾವು ಬಹಿಷ್ಕರಿಸುವುದಾಗಿ ಅವರು ಹೇಳಿದರು” ಎಂದು ಇಂಟರ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ಬಗ್ಗೆ ಉತ್ತರಾಖಂಡ ಸರ್ಕಾರದ ವಿರುದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ನಂತರ ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಚಂದ್ರಶೇಖರ್‌‌, “ಉತ್ತರಾಖಂಡ್‌ನ ಚಂಪಾವತ್ ಜಿಲ್ಲೆಯಲ್ಲಿ ಎಸ್‌ಸಿ ಸಮುದಾಯದ ಅಡುಗೆಯ ಮಹಿಳೆಯನ್ನು ವಜಾ ಮಾಡುವ ಮೂಲಕ ಸರ್ಕಾರ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಅವಮಾನ ಮಾಡಿದೆ. ನಮ್ಮ ಪಕ್ಷ ಮತ್ತು ಭೀಮ್ ಆರ್ಮಿ ತಮ್ಮ ತಾಯಂದಿರ ಮತ್ತು ಸಹೋದರಿಯರ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆಕೆಯನ್ನು ಮತ್ತೇ ಹುದ್ದೆಗೆ ಸೇರಿಸಿಕೊಳ್ಳದಿದ್ದರೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ವಿರುದ್ದ ಘೋರ ಹೋರಾಟ ಮಾಡುತ್ತೇವೆ. ಸ್ನೇಹಿತರೇ, ಪ್ರತಿಭಟನೆಗೆ ತಯಾರಿ ಆರಂಭಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲಾಯಕ್ ಮುಖ್ಯಮ್ಂತ್ರಿ ಅವನು. ಮಕ್ಕಳು ಮೇಲ್ಜಾತಿಯವರಿಗೆ ಸರಿಯಾಗಿ ಬುದ್ದಿ ಕಲಿಸ್ತಿದ್ದಾರೆ. ಜೈ ಭೀಮ್‌ಆರ್ಮಿ.

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...