Homeದಲಿತ್ ಫೈಲ್ಸ್‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

‘ಪ್ರತಿಭಟನೆ’: ಮೇಲ್ಜಾತಿ ಮಹಿಳೆ ತಯಾರಿಸಿದ ಊಟ ನಿರಾಕರಿಸಿದ ದಲಿತ ವಿದ್ಯಾರ್ಥಿಗಳು

ಇತ್ತೀಚೆಗೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು.

- Advertisement -
- Advertisement -

ಉತ್ತರಾಖಂಡದ ದಲಿತ ವಿದ್ಯಾರ್ಥಿಗಳ ಗುಂಪೊಂದು ಮೇಲ್ಜಾತಿ ಹಿಂದೂ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ತಿನ್ನಲು ನಿರಾಕರಿಸಿದ್ದಾರೆ. ಈ ಹಿಂದೆ ಅದೇ ಶಾಲೆಯಲ್ಲಿ ದಲಿತ ಮಹಿಳೆ ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಉತ್ತರಾಖಂಡ್‌ ರಾಜ್ಯದ ಚಂಪಾವತ್ ಜಿಲ್ಲೆಯ ಸುಖಿಧಾಂಗ್‌ನ ಸರ್ಕಾರಿ ಇಂಟರ್ ಕಾಲೇಜ್‌ನಲ್ಲಿ ಈ ಘಟನೆ ನಡೆದಿದೆ.

ಕಳೆದ ವಾರ, ದಲಿತ ಸಮುದಾಯಕ್ಕೆ ಸೇರಿದ ಸುನೀತಾ ದೇವಿ ಅವರು ತಯಾರಿಸಿದ ಊಟವನ್ನು ಮೇಲ್ಜಾತಿ ಹಿಂದೂ ವಿದ್ಯಾರ್ಥಿಗಳು ತಿನ್ನಲು ನಿರಾಕರಿಸಿದ್ದರು. ಆದರೆ ಗಾಯಕ್ಕೆ ಉಪ್ಪು ಸವರಿದ್ದ ರಾಜ್ಯ ಸರ್ಕಾರ ಸುನೀತಾ ದೇವಿ ಅವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಆದರೆ, ದಲಿತ ಸಮುದಾಯಕ್ಕೆ ಸೇರಿದ 23 ವಿದ್ಯಾರ್ಥಿಗಳು ಸುನಿತಾ ದೇವಿಯ ಬದಲಿಯಾಗಿ ನೇಮಕಗೊಂಡ ಮೇಲ್ಜಾತಿ ಹಿಂದೂ ಮಹಿಳೆ ವಿಮಿಲೇಶ್ ಉಪ್ರೇತಿ ಅವರು ತಯಾರಿಸಿದ ಊಟವನ್ನು ತಿನ್ನಲು ನಿರಾಕರಿಸುವ ಮೂಲಕ ಪ್ರತಿಭಟಿಸಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಶುಕ್ರವಾರದಂದು ಮಧ್ಯಾಹ್ನದ ಊಟವನ್ನು ಬಡಿಸುತ್ತಿರುವಾಗ, 23 ದಲಿತ ವಿದ್ಯಾರ್ಥಿಗಳು ಆಹಾರವನ್ನು ತಿನ್ನಲು ನಿರಾಕರಿಸಿದ್ದಾರೆ. “ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದರೆ, ಮೇಲ್ಜಾತಿಯ ಮಹಿಳೆ ತಯಾರಿಸಿದ ಊಟವನ್ನು ನಾವು ಬಹಿಷ್ಕರಿಸುವುದಾಗಿ ಅವರು ಹೇಳಿದರು” ಎಂದು ಇಂಟರ್ ಕಾಲೇಜಿನ ಪ್ರಾಂಶುಪಾಲ ಪ್ರೇಮ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ, ಉತ್ತರಾಖಂಡ ಚುನಾವಣೆಗೆ 150 ಕ್ಕೂ ಹೆಚ್ಚು ಹಿರಿಯ ಬಿಜೆಪಿ ನಾಯಕರ ನಿಯೋಜನೆ

ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ಬಗ್ಗೆ ಉತ್ತರಾಖಂಡ ಸರ್ಕಾರದ ವಿರುದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ನಂತರ ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಚಂದ್ರಶೇಖರ್‌‌, “ಉತ್ತರಾಖಂಡ್‌ನ ಚಂಪಾವತ್ ಜಿಲ್ಲೆಯಲ್ಲಿ ಎಸ್‌ಸಿ ಸಮುದಾಯದ ಅಡುಗೆಯ ಮಹಿಳೆಯನ್ನು ವಜಾ ಮಾಡುವ ಮೂಲಕ ಸರ್ಕಾರ ದಲಿತ ಸಮುದಾಯದ ಸ್ವಾಭಿಮಾನಕ್ಕೆ ಅವಮಾನ ಮಾಡಿದೆ. ನಮ್ಮ ಪಕ್ಷ ಮತ್ತು ಭೀಮ್ ಆರ್ಮಿ ತಮ್ಮ ತಾಯಂದಿರ ಮತ್ತು ಸಹೋದರಿಯರ ಸ್ವಾಭಿಮಾನದೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಆಕೆಯನ್ನು ಮತ್ತೇ ಹುದ್ದೆಗೆ ಸೇರಿಸಿಕೊಳ್ಳದಿದ್ದರೆ ಮುಖ್ಯಮಂತ್ರಿ ಪುಷ್ಕರ್ ಧಾಮಿ ವಿರುದ್ದ ಘೋರ ಹೋರಾಟ ಮಾಡುತ್ತೇವೆ. ಸ್ನೇಹಿತರೇ, ಪ್ರತಿಭಟನೆಗೆ ತಯಾರಿ ಆರಂಭಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ:ಕೆಲವೇ ತಿಂಗಳಲ್ಲಿ ಉತ್ತರಾಖಂಡ ಚುನಾವಣೆ: ಶಂಕರಾಚಾರ್ಯ ಪ್ರತಿಮೆ ಉದ್ಘಾಟಿಸಿ ರಾಮಮಂದಿರದ ಬಗ್ಗೆ ಉಲ್ಲೇಖಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಲಾಯಕ್ ಮುಖ್ಯಮ್ಂತ್ರಿ ಅವನು. ಮಕ್ಕಳು ಮೇಲ್ಜಾತಿಯವರಿಗೆ ಸರಿಯಾಗಿ ಬುದ್ದಿ ಕಲಿಸ್ತಿದ್ದಾರೆ. ಜೈ ಭೀಮ್‌ಆರ್ಮಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...