Homeಮುಖಪುಟಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

ಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

- Advertisement -
- Advertisement -

ಹೊಸದಾಗಿ ರಚನೆಯಾದ ಎಂಟನೇ ದೆಹಲಿ ವಿಧಾನಸಭೆಯ ಮೊದಲ ಬಜೆಟ್ ಅಧಿವೇಶನದ ಕೊನೆಯ ದಿನ ಕಾನೂನು ಮತ್ತು ನ್ಯಾಯ ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಎಎಪಿ ಶಾಸಕರು ಪ್ರತಿಭಟನೆ ನಡೆಸಿದ್ದರಿಂದ ಭಾರೀ ಗದ್ದಲ ಉಂಟಾಯಿತು.

2020ರ ದೆಹಲಿ ಗಲಭೆಯಲ್ಲಿ ಕಪಿಲ್ ಮಿಶ್ರಾ ಪಾತ್ರಕ್ಕೆ ಸಂಬಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳವಾರ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆ ಮಿಶ್ರಾ ರಾಜೀನಾಮೆಗೆ ಎಎಪಿ ಸದಸ್ಯರು ಪಟ್ಟು ಹಿಡಿದರು.

ಎಎಪಿ ಶಾಸಕರು ವಿಧಾನಸಭೆಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ಕಾರಣಕ್ಕೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಎಎಪಿ ಶಾಸಕರಾದ ಕುಲದೀಪ್ ಕುಮಾರ್, ಸಂಜೀವ್ ಝಾ, ಮುಖೇಶ್ ಅಹ್ಲಾವತ್, ಸುರೇಂದ್ರ ಕುಮಾರ್, ಜರ್ನೈಲ್ ಸಿಂಗ್, ಆಲೆ ಮೊಹಮ್ಮದ್ ಮತ್ತು ಅನಿಲ್ ಝಾ ಅವರನ್ನು ಅಮಾನತುಗೊಳಿಸಿದ್ದಾರೆ.

ವಿರೋಧ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಅವರು ಎಎಪಿ ಶಾಸಕರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಪಿಲ್ ಮಿಶ್ರಾ ಅವರನ್ನು ರಕ್ಷಿಸುತ್ತಿದೆ. ದೆಹಲಿ ಗಲಭೆಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಕಪಿಲ್ ಮಿಶ್ರಾ ಏಕೆ ಜೈಲಿನಲ್ಲಿಲ್ಲ? ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ, ಬಿಜೆಪಿ ಅವರನ್ನು ರಕ್ಷಿಸುತ್ತಿದೆ” ಎಂದು ಹೇಳಿದ್ದಾರೆ.

ಕಲಾಪದ ವೇಳೆ ಅಮಾನತುಗೊಂಡ ಶಾಸಕರು ಸದನದ ಆವರಣದಲ್ಲಿಯೇ ಇದ್ದಾರೆಯೇ? ಅಮಾನತು ಆದೇಶದ ಬಳಿಕವೂ ಪ್ರತಿಭಟನೆ ಮುಂದುವರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುವಂತೆ ಸ್ಪೀಕರ್ ಗುಪ್ತಾ ಅವರು ವಿಧಾನಸಭಾ ಕಾರ್ಯದರ್ಶಿಗೆ ಸೂಚನೆ ನೀಡಿದ ಪ್ರಸಂಗವೂ ನಡೆಯಿತು.

ಮಾರ್ಚ್ 3ರಂದು ಎಂಟನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಸ್ಪೀಕರ್ ಗುಪ್ತಾಅವರು, ಅಮಾನತುಗೊಂಡ ಅಥವಾ ಮಾರ್ಷಲ್ ಔಟ್ ಆದ ಶಾಸಕರು ವಿಧಾನಸಭಾ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಬೇಕು ಎಂದು ಹೇಳಿದ್ದರು.

ಅಮಾನತುಗೊಂಡ ಶಾಸಕರು ವಿಧಾನಸಭಾ ಸಂಕೀರ್ಣದ ಹುಲ್ಲುಹಾಸುಗಳು ಮತ್ತು ವಿರೋಧ ಪಕ್ಷದ ನಾಯಕರ ಕಚೇರಿಯಂತಹ ಕೆಲವು ಪ್ರದೇಶಗಳಲ್ಲಿ ಉಳಿಯಬಹುದೇ? ಎಂಬ ಗೊಂದಲಕ್ಕೆ ಪ್ರತಿಕ್ರಿಯೆಯಾಗಿ ಸ್ಪೀಕರ್ ಮೇಲಿನಂತೆ ತಿಳಿಸಿದ್ದರು.

“ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ” ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಮಂಗಳವಾರ ಆದೇಶ ನೀಡುವಾಗ ಹೇಳಿದ್ದರು.

ಏಪ್ರಿಲ್ 16 ರೊಳಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ಆದೇಶಿಸಿದೆ.

ಫೆಬ್ರವರಿ 24, 2020ರಂದು ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ 53 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಕೋಮು ಹಿಂಸಾಚಾರದಲ್ಲಿ ಕಪಿಲ್ ಮಿಶ್ರಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಆದೇಶ ನೀಡಿದೆ.

ಗಲಭೆಯ ಹಿಂದೆ ಕಪಿಲ್ ಮಿಶ್ರಾ ಪಾತ್ರವಿಲ್ಲ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದರು. ಆದರೆ, ನ್ಯಾಯಾಲಯದ ಆದೇಶ ಪೊಲೀಸರ ಕಾರ್ಯವೈಖರಿಯ ಮೇಲೆ ಅನುಮಾನ ಮೂಡುವಂತೆ ಮಾಡಿದೆ.

ರೈಲ್ವೆ, ರಕ್ಷಣಾ ಭೂಮಿ ಮಾರಿ ಆಯ್ತು, ಈಗ ವಕ್ಫ್ ಭೂಮಿ ಮಾರಾಟಕ್ಕೆ ಮುಂದಾಗಿದ್ದಾರೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...