Homeಮುಖಪುಟಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

ಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

- Advertisement -
- Advertisement -

ಹೊಸದಾಗಿ ರಚನೆಯಾದ ಎಂಟನೇ ದೆಹಲಿ ವಿಧಾನಸಭೆಯ ಮೊದಲ ಬಜೆಟ್ ಅಧಿವೇಶನದ ಕೊನೆಯ ದಿನ ಕಾನೂನು ಮತ್ತು ನ್ಯಾಯ ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಎಎಪಿ ಶಾಸಕರು ಪ್ರತಿಭಟನೆ ನಡೆಸಿದ್ದರಿಂದ ಭಾರೀ ಗದ್ದಲ ಉಂಟಾಯಿತು.

2020ರ ದೆಹಲಿ ಗಲಭೆಯಲ್ಲಿ ಕಪಿಲ್ ಮಿಶ್ರಾ ಪಾತ್ರಕ್ಕೆ ಸಂಬಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳವಾರ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆ ಮಿಶ್ರಾ ರಾಜೀನಾಮೆಗೆ ಎಎಪಿ ಸದಸ್ಯರು ಪಟ್ಟು ಹಿಡಿದರು.

ಎಎಪಿ ಶಾಸಕರು ವಿಧಾನಸಭೆಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ಕಾರಣಕ್ಕೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಎಎಪಿ ಶಾಸಕರಾದ ಕುಲದೀಪ್ ಕುಮಾರ್, ಸಂಜೀವ್ ಝಾ, ಮುಖೇಶ್ ಅಹ್ಲಾವತ್, ಸುರೇಂದ್ರ ಕುಮಾರ್, ಜರ್ನೈಲ್ ಸಿಂಗ್, ಆಲೆ ಮೊಹಮ್ಮದ್ ಮತ್ತು ಅನಿಲ್ ಝಾ ಅವರನ್ನು ಅಮಾನತುಗೊಳಿಸಿದ್ದಾರೆ.

ವಿರೋಧ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಅವರು ಎಎಪಿ ಶಾಸಕರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಪಿಲ್ ಮಿಶ್ರಾ ಅವರನ್ನು ರಕ್ಷಿಸುತ್ತಿದೆ. ದೆಹಲಿ ಗಲಭೆಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಕಪಿಲ್ ಮಿಶ್ರಾ ಏಕೆ ಜೈಲಿನಲ್ಲಿಲ್ಲ? ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ, ಬಿಜೆಪಿ ಅವರನ್ನು ರಕ್ಷಿಸುತ್ತಿದೆ” ಎಂದು ಹೇಳಿದ್ದಾರೆ.

ಕಲಾಪದ ವೇಳೆ ಅಮಾನತುಗೊಂಡ ಶಾಸಕರು ಸದನದ ಆವರಣದಲ್ಲಿಯೇ ಇದ್ದಾರೆಯೇ? ಅಮಾನತು ಆದೇಶದ ಬಳಿಕವೂ ಪ್ರತಿಭಟನೆ ಮುಂದುವರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುವಂತೆ ಸ್ಪೀಕರ್ ಗುಪ್ತಾ ಅವರು ವಿಧಾನಸಭಾ ಕಾರ್ಯದರ್ಶಿಗೆ ಸೂಚನೆ ನೀಡಿದ ಪ್ರಸಂಗವೂ ನಡೆಯಿತು.

ಮಾರ್ಚ್ 3ರಂದು ಎಂಟನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಸ್ಪೀಕರ್ ಗುಪ್ತಾಅವರು, ಅಮಾನತುಗೊಂಡ ಅಥವಾ ಮಾರ್ಷಲ್ ಔಟ್ ಆದ ಶಾಸಕರು ವಿಧಾನಸಭಾ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಬೇಕು ಎಂದು ಹೇಳಿದ್ದರು.

ಅಮಾನತುಗೊಂಡ ಶಾಸಕರು ವಿಧಾನಸಭಾ ಸಂಕೀರ್ಣದ ಹುಲ್ಲುಹಾಸುಗಳು ಮತ್ತು ವಿರೋಧ ಪಕ್ಷದ ನಾಯಕರ ಕಚೇರಿಯಂತಹ ಕೆಲವು ಪ್ರದೇಶಗಳಲ್ಲಿ ಉಳಿಯಬಹುದೇ? ಎಂಬ ಗೊಂದಲಕ್ಕೆ ಪ್ರತಿಕ್ರಿಯೆಯಾಗಿ ಸ್ಪೀಕರ್ ಮೇಲಿನಂತೆ ತಿಳಿಸಿದ್ದರು.

“ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ” ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಮಂಗಳವಾರ ಆದೇಶ ನೀಡುವಾಗ ಹೇಳಿದ್ದರು.

ಏಪ್ರಿಲ್ 16 ರೊಳಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ಆದೇಶಿಸಿದೆ.

ಫೆಬ್ರವರಿ 24, 2020ರಂದು ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ 53 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಕೋಮು ಹಿಂಸಾಚಾರದಲ್ಲಿ ಕಪಿಲ್ ಮಿಶ್ರಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಆದೇಶ ನೀಡಿದೆ.

ಗಲಭೆಯ ಹಿಂದೆ ಕಪಿಲ್ ಮಿಶ್ರಾ ಪಾತ್ರವಿಲ್ಲ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದರು. ಆದರೆ, ನ್ಯಾಯಾಲಯದ ಆದೇಶ ಪೊಲೀಸರ ಕಾರ್ಯವೈಖರಿಯ ಮೇಲೆ ಅನುಮಾನ ಮೂಡುವಂತೆ ಮಾಡಿದೆ.

ರೈಲ್ವೆ, ರಕ್ಷಣಾ ಭೂಮಿ ಮಾರಿ ಆಯ್ತು, ಈಗ ವಕ್ಫ್ ಭೂಮಿ ಮಾರಾಟಕ್ಕೆ ಮುಂದಾಗಿದ್ದಾರೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...