Homeಮುಖಪುಟಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

ಕಪಿಲ್ ಮಿಶ್ರಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ದೆಹಲಿ ವಿಧಾನಸಭೆಯಿಂದ ಎಎಪಿ ಶಾಸಕರು ಅಮಾನತು

- Advertisement -
- Advertisement -

ಹೊಸದಾಗಿ ರಚನೆಯಾದ ಎಂಟನೇ ದೆಹಲಿ ವಿಧಾನಸಭೆಯ ಮೊದಲ ಬಜೆಟ್ ಅಧಿವೇಶನದ ಕೊನೆಯ ದಿನ ಕಾನೂನು ಮತ್ತು ನ್ಯಾಯ ಸಚಿವ ಕಪಿಲ್ ಮಿಶ್ರಾ ಅವರ ರಾಜೀನಾಮೆಗೆ ಒತ್ತಾಯಿಸಿ ಎಎಪಿ ಶಾಸಕರು ಪ್ರತಿಭಟನೆ ನಡೆಸಿದ್ದರಿಂದ ಭಾರೀ ಗದ್ದಲ ಉಂಟಾಯಿತು.

2020ರ ದೆಹಲಿ ಗಲಭೆಯಲ್ಲಿ ಕಪಿಲ್ ಮಿಶ್ರಾ ಪಾತ್ರಕ್ಕೆ ಸಂಬಧಿಸಿದಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳವಾರ ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆ ಮಿಶ್ರಾ ರಾಜೀನಾಮೆಗೆ ಎಎಪಿ ಸದಸ್ಯರು ಪಟ್ಟು ಹಿಡಿದರು.

ಎಎಪಿ ಶಾಸಕರು ವಿಧಾನಸಭೆಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ಕಾರಣಕ್ಕೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ಎಎಪಿ ಶಾಸಕರಾದ ಕುಲದೀಪ್ ಕುಮಾರ್, ಸಂಜೀವ್ ಝಾ, ಮುಖೇಶ್ ಅಹ್ಲಾವತ್, ಸುರೇಂದ್ರ ಕುಮಾರ್, ಜರ್ನೈಲ್ ಸಿಂಗ್, ಆಲೆ ಮೊಹಮ್ಮದ್ ಮತ್ತು ಅನಿಲ್ ಝಾ ಅವರನ್ನು ಅಮಾನತುಗೊಳಿಸಿದ್ದಾರೆ.

ವಿರೋಧ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಅವರು ಎಎಪಿ ಶಾಸಕರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಪಿಲ್ ಮಿಶ್ರಾ ಅವರನ್ನು ರಕ್ಷಿಸುತ್ತಿದೆ. ದೆಹಲಿ ಗಲಭೆಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಕಪಿಲ್ ಮಿಶ್ರಾ ಏಕೆ ಜೈಲಿನಲ್ಲಿಲ್ಲ? ನಾವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದೇವೆ. ಆದರೆ, ಬಿಜೆಪಿ ಅವರನ್ನು ರಕ್ಷಿಸುತ್ತಿದೆ” ಎಂದು ಹೇಳಿದ್ದಾರೆ.

ಕಲಾಪದ ವೇಳೆ ಅಮಾನತುಗೊಂಡ ಶಾಸಕರು ಸದನದ ಆವರಣದಲ್ಲಿಯೇ ಇದ್ದಾರೆಯೇ? ಅಮಾನತು ಆದೇಶದ ಬಳಿಕವೂ ಪ್ರತಿಭಟನೆ ಮುಂದುವರಿಸುತ್ತಿದ್ದಾರೆಯೇ ಎಂದು ಪರಿಶೀಲಿಸುವಂತೆ ಸ್ಪೀಕರ್ ಗುಪ್ತಾ ಅವರು ವಿಧಾನಸಭಾ ಕಾರ್ಯದರ್ಶಿಗೆ ಸೂಚನೆ ನೀಡಿದ ಪ್ರಸಂಗವೂ ನಡೆಯಿತು.

ಮಾರ್ಚ್ 3ರಂದು ಎಂಟನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಸ್ಪೀಕರ್ ಗುಪ್ತಾಅವರು, ಅಮಾನತುಗೊಂಡ ಅಥವಾ ಮಾರ್ಷಲ್ ಔಟ್ ಆದ ಶಾಸಕರು ವಿಧಾನಸಭಾ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಬೇಕು ಎಂದು ಹೇಳಿದ್ದರು.

ಅಮಾನತುಗೊಂಡ ಶಾಸಕರು ವಿಧಾನಸಭಾ ಸಂಕೀರ್ಣದ ಹುಲ್ಲುಹಾಸುಗಳು ಮತ್ತು ವಿರೋಧ ಪಕ್ಷದ ನಾಯಕರ ಕಚೇರಿಯಂತಹ ಕೆಲವು ಪ್ರದೇಶಗಳಲ್ಲಿ ಉಳಿಯಬಹುದೇ? ಎಂಬ ಗೊಂದಲಕ್ಕೆ ಪ್ರತಿಕ್ರಿಯೆಯಾಗಿ ಸ್ಪೀಕರ್ ಮೇಲಿನಂತೆ ತಿಳಿಸಿದ್ದರು.

“ಗಲಭೆ ಸಂಭವಿಸಿದಾಗ ಮಿಶ್ರಾ ಅವರು ಅಲ್ಲಿ ಇದ್ದಿದ್ದು ಸ್ಪಷ್ಟವಾಗಿದೆ. ಮೇಲ್ನೋಟಕ್ಕೆ ಗುರುತಿಸಬಹುದಾದ ಅಪರಾಧ ಗೋಚರಿಸುತ್ತಿದೆ. ಆದ್ದರಿಂದ ತನಿಖೆಯ ಅಗತ್ಯವಿದೆ” ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಮಂಗಳವಾರ ಆದೇಶ ನೀಡುವಾಗ ಹೇಳಿದ್ದರು.

ಏಪ್ರಿಲ್ 16 ರೊಳಗೆ ಅನುಸರಣಾ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ಆದೇಶಿಸಿದೆ.

ಫೆಬ್ರವರಿ 24, 2020ರಂದು ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ 53 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಕೋಮು ಹಿಂಸಾಚಾರದಲ್ಲಿ ಕಪಿಲ್ ಮಿಶ್ರಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಆದೇಶ ನೀಡಿದೆ.

ಗಲಭೆಯ ಹಿಂದೆ ಕಪಿಲ್ ಮಿಶ್ರಾ ಪಾತ್ರವಿಲ್ಲ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದರು. ಆದರೆ, ನ್ಯಾಯಾಲಯದ ಆದೇಶ ಪೊಲೀಸರ ಕಾರ್ಯವೈಖರಿಯ ಮೇಲೆ ಅನುಮಾನ ಮೂಡುವಂತೆ ಮಾಡಿದೆ.

ರೈಲ್ವೆ, ರಕ್ಷಣಾ ಭೂಮಿ ಮಾರಿ ಆಯ್ತು, ಈಗ ವಕ್ಫ್ ಭೂಮಿ ಮಾರಾಟಕ್ಕೆ ಮುಂದಾಗಿದ್ದಾರೆ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...