Homeಚಳವಳಿನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಬಂಧಿತ ಹೋರಾಟಗಾರರ ಬಿಡುಗಡೆ: 2ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ ಕಾಲಿಟ್ಟಿದೆ.

ಬಿಡುಗಡೆ ಬಳಿಕ ಮಾತನಾಡಿದ ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್, “ಕಳೆದ ನವೆಂಬರ್ 28ರಿಂದ 350 ಕಿ.ಮಿ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದೇವೆ. ಇದು ಸಮುದಾಯ ಹಿತಾಸಕ್ತಿಯ ಸ್ವಾಭಿಮಾನದ ಹೋರಾಟವೇ ಹೊರತು ಯಾವುದೇ ಪಕ್ಷ ಪ್ರೇರಿತ ಹೋರಾಟವಲ್ಲ. ಬೊಮ್ಮಾಯಿಯವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಚರ್ಚೆ ನಡೆಸಬೇಕಿತ್ತು. ಆದರೆ ಲಾಠೀ ಚಾರ್ಜ್ ಮಾಡಿ, ಬಂಧಿಸಿ ಅವರ ತಮ್ಮ ಕಾಲ ಮೇಲೆ ಅವರೆ ಕಲ್ಲು ಹಾಕಿಕೊಂಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳು ರಾಯಚೂರಿಗೆ ಬಂದಾಗ ನಾವೇ ಒಳಮೀಸಲಾತಿ ಜಾರಿ ಮಾಡುತ್ತೇವೆ, ನೀವು ಗಾಬರಿ ಪಡಬೇಕಿಲ್ಲ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಾವು ಬೆಂಗಳೂರಿಗೆ ಬಂದರೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಆದರೆ ಸರ್ಕಾರದ ಲಾಠಿ ಬೂಟಿಗೆ ಹೆದರುವವರು ನಾವಲ್ಲ, ನಾವು ಅಂಬೇಡ್ಕರ್‌ರವರ ಮಕ್ಕಳು. ಅವರು ನಮಗೆ ಕಾನೂನು ಕಲಿಸಿದ್ದಾರೆ. ಅದರಂತೆಯೇ ಹೋರಾಡುತ್ತೇವೆ. ನಿಮಗೆ ಕಾನೂನು ಗೊತ್ತಿದ್ದರೆ ಒಳಮೀಸಲಾತಿ ಜಾರಿಗೊಳಿಸಿ” ಎಂದರು.

ಸಿಎಂ ಬೊಮ್ಮಾಯಿಯವರೆ, ಸಂವಿಧಾನದ ಮೇಲೆ, ಪ್ರಜಾತಂತ್ರದ ಮೇಲೆ, ನೀವು ಕೂತಿರುವ ಕುರ್ಚಿಯ ಮೇಲೆ ನಿಮಗೆ ಏನಾದರೂ ಘನತೆ, ಗೌರವವಿದ್ದರೆ, ಡಿಸೆಂಬರ್ 19 ಅಧಿವೇಶನ ಆರಂಭವಾಗುವ ಮೊದಲೇ ದಿನವೇ 101 ಜಾತಿಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುತ್ತೇವೆ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಅದು ಸಂವಿಧಾನಾತ್ಮಕವಾಗಿ ಸರ್ಕಾರದ ಜವಾಬ್ದಾರಿ. ಕೇವಲ ನಮ್ಮನ್ನು ಬಂಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಸುನಾಮಿಯಂತೆ ಪುಟಿದೆದ್ದ ಹೋರಾಟದ ಕಣಕ್ಕಿಳಿಯುತ್ತೇವೆ. ಎಲ್ಲಾ ದಲಿತ, ಮಾದಿಗ, ಪ್ರಜಾತಂತ್ರವಾದಿಗಳು ಈ ಹೋರಾಟದ ಜೊತೆಗಿದ್ದಾರೆ ಎಂದು ಅಂಬಣ್ಣ ತಿಳಿಸಿದ್ದಾರೆ.

ಇದು ಕೇವಲ ಆಳುವ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕುಮಾರಸ್ವಾಮಿಯವರು ತಮ್ಮ ಪಕ್ಷದ ಎಲ್ಲಾ ಶಾಸಕರ ಮನವೊಲಿಸಿ ಒಳಮೀಸಲಾತಿ ಜಾರಿಗೆ ಶ್ರಮಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ನಿಮಗೂ ಪಾಠ ಕಲಿಸುತ್ತೇವೆ ಎಂದರು.

ಇನ್ನೊಂದೆಡೆ ತಲೆ ಮತ್ತು ಕಾಲಿಗೆ ಪೆಟ್ಟುಬಿಟ್ಟು ಆಸ್ಪತ್ರೆ ಸೇರಿದ್ದ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಸಹ ಚೇತರಿಸಿಕೊಂಡಿದ್ದು ಹೋರಾಟದ ಕಣ ಸೇರಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿಗಿಳಿದು ಹೋರಾಟ ಸಾಕೆ?ಮುಖ್ಯವಾಗಿ ಸಮುದಾಯ ದವರಿಗೆ ತಮ್ಮ ತಮ್ಮ ಮತಗಳ ಮೌಲ್ಯದ ಬಗ್ಗೆ ಅರಿವುಮೂಡಿಸೋದು ಸಮುದಾಯದ ರಾಜಕೀಯ ಅಧಿಕಾರ ಹಿಡಿಯಲು ಮುಖ್ಯವಾದ ಮೆಟ್ಟಿಲು.ಇದು ಅರಿತಿರುವುದರಿಂದಲೇ ಒಕ್ಕಳಿಗರಾಗಲಿ,ಲಿಂಗಾಯತರಾಗಲಿ,ಕುರುಬರಾಗಲಿ ಬೀದಿ ಗಿಳಿಯುವುದಕ್ಕಿಂತ ತಮ್ಮ ತಮ್ಮ ಮತಗಳನ್ನ ವಿವೇಚನೆಯಿಂದ ಬಳಸಿ ರಾಜಕೀಯ ಅಧಿಕಾರ ಗಳಿಸಿದ್ದಾರೆ.
    ಭಾಬಾಸಾಹೇಬರು ನೀಡಿರುವ ಈ ಅಸ್ತ್ರ ಬಿಟ್ಟು ಮನುವಾದಿ, ಜಾತಿವಾದಿ ಅದಿಕಾರಸ್ತರ ಬಳಿ ಬೇಡುವುದೇಕೆ?

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...