Homeಚಳವಳಿನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಬಂಧಿತ ಹೋರಾಟಗಾರರ ಬಿಡುಗಡೆ: 2ನೇ ದಿನಕ್ಕೆ ಕಾಲಿಟ್ಟ ಒಳಮೀಸಲಾತಿ ಹೋರಾಟ

- Advertisement -
- Advertisement -

ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ ಕಾಲಿಟ್ಟಿದೆ.

ಬಿಡುಗಡೆ ಬಳಿಕ ಮಾತನಾಡಿದ ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್, “ಕಳೆದ ನವೆಂಬರ್ 28ರಿಂದ 350 ಕಿ.ಮಿ ಪಾದಯಾತ್ರೆ ಮಾಡಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದೇವೆ. ಇದು ಸಮುದಾಯ ಹಿತಾಸಕ್ತಿಯ ಸ್ವಾಭಿಮಾನದ ಹೋರಾಟವೇ ಹೊರತು ಯಾವುದೇ ಪಕ್ಷ ಪ್ರೇರಿತ ಹೋರಾಟವಲ್ಲ. ಬೊಮ್ಮಾಯಿಯವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡು ಚರ್ಚೆ ನಡೆಸಬೇಕಿತ್ತು. ಆದರೆ ಲಾಠೀ ಚಾರ್ಜ್ ಮಾಡಿ, ಬಂಧಿಸಿ ಅವರ ತಮ್ಮ ಕಾಲ ಮೇಲೆ ಅವರೆ ಕಲ್ಲು ಹಾಕಿಕೊಂಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳು ರಾಯಚೂರಿಗೆ ಬಂದಾಗ ನಾವೇ ಒಳಮೀಸಲಾತಿ ಜಾರಿ ಮಾಡುತ್ತೇವೆ, ನೀವು ಗಾಬರಿ ಪಡಬೇಕಿಲ್ಲ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಾವು ಬೆಂಗಳೂರಿಗೆ ಬಂದರೆ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಆದರೆ ಸರ್ಕಾರದ ಲಾಠಿ ಬೂಟಿಗೆ ಹೆದರುವವರು ನಾವಲ್ಲ, ನಾವು ಅಂಬೇಡ್ಕರ್‌ರವರ ಮಕ್ಕಳು. ಅವರು ನಮಗೆ ಕಾನೂನು ಕಲಿಸಿದ್ದಾರೆ. ಅದರಂತೆಯೇ ಹೋರಾಡುತ್ತೇವೆ. ನಿಮಗೆ ಕಾನೂನು ಗೊತ್ತಿದ್ದರೆ ಒಳಮೀಸಲಾತಿ ಜಾರಿಗೊಳಿಸಿ” ಎಂದರು.

ಸಿಎಂ ಬೊಮ್ಮಾಯಿಯವರೆ, ಸಂವಿಧಾನದ ಮೇಲೆ, ಪ್ರಜಾತಂತ್ರದ ಮೇಲೆ, ನೀವು ಕೂತಿರುವ ಕುರ್ಚಿಯ ಮೇಲೆ ನಿಮಗೆ ಏನಾದರೂ ಘನತೆ, ಗೌರವವಿದ್ದರೆ, ಡಿಸೆಂಬರ್ 19 ಅಧಿವೇಶನ ಆರಂಭವಾಗುವ ಮೊದಲೇ ದಿನವೇ 101 ಜಾತಿಗಳ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುತ್ತೇವೆ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಅದು ಸಂವಿಧಾನಾತ್ಮಕವಾಗಿ ಸರ್ಕಾರದ ಜವಾಬ್ದಾರಿ. ಕೇವಲ ನಮ್ಮನ್ನು ಬಂಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಸುನಾಮಿಯಂತೆ ಪುಟಿದೆದ್ದ ಹೋರಾಟದ ಕಣಕ್ಕಿಳಿಯುತ್ತೇವೆ. ಎಲ್ಲಾ ದಲಿತ, ಮಾದಿಗ, ಪ್ರಜಾತಂತ್ರವಾದಿಗಳು ಈ ಹೋರಾಟದ ಜೊತೆಗಿದ್ದಾರೆ ಎಂದು ಅಂಬಣ್ಣ ತಿಳಿಸಿದ್ದಾರೆ.

ಇದು ಕೇವಲ ಆಳುವ ಸರ್ಕಾರದ ಜವಾಬ್ದಾರಿಯಲ್ಲ. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕುಮಾರಸ್ವಾಮಿಯವರು ತಮ್ಮ ಪಕ್ಷದ ಎಲ್ಲಾ ಶಾಸಕರ ಮನವೊಲಿಸಿ ಒಳಮೀಸಲಾತಿ ಜಾರಿಗೆ ಶ್ರಮಿಸಬೇಕು. ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ನಿಮಗೂ ಪಾಠ ಕಲಿಸುತ್ತೇವೆ ಎಂದರು.

ಇನ್ನೊಂದೆಡೆ ತಲೆ ಮತ್ತು ಕಾಲಿಗೆ ಪೆಟ್ಟುಬಿಟ್ಟು ಆಸ್ಪತ್ರೆ ಸೇರಿದ್ದ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರು ಸಹ ಚೇತರಿಸಿಕೊಂಡಿದ್ದು ಹೋರಾಟದ ಕಣ ಸೇರಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೀದಿಗಿಳಿದು ಹೋರಾಟ ಸಾಕೆ?ಮುಖ್ಯವಾಗಿ ಸಮುದಾಯ ದವರಿಗೆ ತಮ್ಮ ತಮ್ಮ ಮತಗಳ ಮೌಲ್ಯದ ಬಗ್ಗೆ ಅರಿವುಮೂಡಿಸೋದು ಸಮುದಾಯದ ರಾಜಕೀಯ ಅಧಿಕಾರ ಹಿಡಿಯಲು ಮುಖ್ಯವಾದ ಮೆಟ್ಟಿಲು.ಇದು ಅರಿತಿರುವುದರಿಂದಲೇ ಒಕ್ಕಳಿಗರಾಗಲಿ,ಲಿಂಗಾಯತರಾಗಲಿ,ಕುರುಬರಾಗಲಿ ಬೀದಿ ಗಿಳಿಯುವುದಕ್ಕಿಂತ ತಮ್ಮ ತಮ್ಮ ಮತಗಳನ್ನ ವಿವೇಚನೆಯಿಂದ ಬಳಸಿ ರಾಜಕೀಯ ಅಧಿಕಾರ ಗಳಿಸಿದ್ದಾರೆ.
    ಭಾಬಾಸಾಹೇಬರು ನೀಡಿರುವ ಈ ಅಸ್ತ್ರ ಬಿಟ್ಟು ಮನುವಾದಿ, ಜಾತಿವಾದಿ ಅದಿಕಾರಸ್ತರ ಬಳಿ ಬೇಡುವುದೇಕೆ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...