Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...