Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...