Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...