Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...