Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...