Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...