Homeಕರ್ನಾಟಕಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

ಭೂಮಿ ವಸತಿಗಾಗಿ ಧರಣೆ 14ನೇ ದಿನಕ್ಕೆ: ತಿರುಗಿ ನೋಡದ ಸರ್ಕಾರ..

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಭೂಮಿ ಮತ್ತು ವಸತಿ ನೀಡುವಂತೆ ಒತ್ತಾಯಿಸಿ  ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಡುತ್ತಿದ್ದರೂ ಜಿಲ್ಲಾಧಿಕಾರಿಯೊಬ್ಬರನ್ನು ಹೊರತುಪಡಿಸಿ ಬೇರೆ ಯಾವ ಅಧಿಕಾರಿಗಳೂ ಸಮಸ್ಯೆ ಆಲಿಸಿಲ್ಲ. ಇದಕ್ಕೆ ಧರಣಿನಿರತರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಧರಣಿ ಸ್ಥಳದಿಂದ ಕದಲುವುದಿಲ್ಲ. ಹಲವು ಬಾರಿ ಮನವಿಗಳನ್ನು ಅಧಿಕಾರಿಗಳಿಗೆ ಕೊಟ್ಟು ಬೇಸತ್ತಹೋಗಿದ್ದೇವೆ. ನೆಪಮಾತ್ರಕ್ಕೆ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗುವ ಅಧಿಕಾರಿಗಳು ನಮ್ಮ ಮನವಿಗೆ ಬೆಲೆಯೇ ಕೊಡುತ್ತಿಲ್ಲ. ಆ ಮನವಿಯನ್ನು ಮೂಲೆಗೆಸೆದು ಕುಳಿತುಕೊಳ್ಳುತ್ತಾರೆ. ಮೇಲ್ನೋಟಕ್ಕೆ ಬೇಡಿಕೆ ಈಡೇರಿಸುವ ಭರವಸೆ ಕೊಡುತ್ತಾರೆಯೇ ಹೊರತು. ಈ ಜನರ ನೋವಿಗೆ ಮಿಡಿಯುತ್ತಿಲ್ಲ ಎಂದು ಹೋರಾಟ ಸಮಿತಿ ಸಂಚಾಲಕ ನಾಗಭೂಷಣ್ ಆಪಾದಿಸಿದ್ದಾರೆ.

ಡಿಸೆಂಬರ್ 19ರಂದು ಜಿಲ್ಲಾಧಿಕಾರಿಗಳು ಧರಣಿನಿರತರಿಗೆ ವಸತಿಗಳನ್ನು ನೀಡಲು 4.5 ಎಕರೆ ಭೂಮಿಯನ್ನು ನೀಡಿದ್ದೇವೆ ಎಂದು ಹೇಳಿಕೆ ನೀಡಿರುವುದು ವರದಿಯಾಗಿದೆ. ಜಿಲ್ಲಾಧಿಕಾರಿಗಳು ಭೂಮಿಯನ್ನು ಇದುವರೆಗೂ ನೀಡಿಲ್ಲ. ಇನ್ನೂ ಸ್ಥಳಕ್ಕೆ ಹೋಗಿ ಪರಿಶೀಲಿಸುತ್ತಿದ್ದಾರೆ.  ಅವರು ಗುರುತಿಸಿರುವ  ಜಾಗದಲ್ಲಿ ಹೈಟೆಕ್ಷನ್ ವಿದ್ಯುತ್ ತಂತಿ ಹಾದು ಹೋಗಿದ್ದು, ತುಂಬಾ ತಗ್ಗಾದ ಪ್ರದೇಶವಾಗಿದೆ. ಜನರ ವಾಸಕ್ಕೆ ಯೋಗ್ಯವಾಗಿಲ್ಲ. ಈ ಜಾಗ ಸಮತಟ್ಟಿನಿಂದ ಕೂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಅಷ್ಟೇ ಅಲ್ಲ ಆ ಪ್ರದೇಶ ಬೆಟ್ಟದ ಬುಡದಲ್ಲಿದ್ದು  ಚಿರತೆ, ಕರಡಿಗಳ ಕಾಟವಿದೆ. ಈಗ ಭೂಮಿ ಗುರುತಿಸಿರುವ ಜಾಗ ಸರ್ವೇ ನಂಬರ್ 27 ಮತ್ತು 28 ಎಂದು ಹೇಳಲಾಗಿದೆ. ಇದು ಬ್ಯಾಲ್ಯದಿಂದ ಮೂರು ಕಿಲೋಮೀಟರ್ ದೂರದಲ್ಲಿದೆ. ವಾಸಿಸಲು ಯೋಗ್ಯವಾಗಿಲ್ಲ. ಇದರ ಪಕ್ಕದಲ್ಲೇ 124ನೇ ಸರ್ವೇ ನಂಬರ್ ಭೂಮಿ ಇದ್ದು ಅದರಲ್ಲಿ ಕಳೆದ 20 ವರ್ಷಗಳ ಹಿಂದೆಯೇ ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಇದು ಕೂಡ ಸಮಸ್ಯೆ. ಜೊತೆಗೆ ಮಕ್ಕಳಿಗೆ ಶಾಲೆ, ಆಸ್ಪತ್ರೆಗೆ ಹೋಗಲು ಅಲ್ಲಿಂದ ಕಷ್ಟವಾಗುತ್ತದೆ. ದಿನಸಿಗಳನ್ನು ತರಲು ಕೂಡ ಬ್ಯಾಲ್ಯಕ್ಕೆ ಹೋಗಬೇಕಾಗಿದೆ. ಬ್ಯಾಲ್ಯದ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕಣಪ್ರದೇಶ ವಾಸಯೋಗ್ಯ ಜಾಗವಾಗಿದೆ. ಅದನ್ನು ಕೊಡಿ ಎಂದು ಕೇಳುತ್ತಿದ್ದೇವೆ ಆದರೆ ಕೊಡುತ್ತಿಲ್ಲ ಎಂದ ನಾಗಭೂಷಣ್ ಹೇಳಿದ್ದಾರೆ.

ಈಗ ಗುರುತಿಸಿರುವ  ಸ್ಥಳಕ್ಕೆ ಬಡಜನರು ಹೋಗಲು ಒಪ್ಪುತ್ತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಪ್ರಜೆಗಳ ತೀರ್ಮಾನವೇ ಅಂತಿಮ ತೀರ್ಮಾನವಾಗಿದ್ದು, ಜಿಲ್ಲಾಡಳಿತ ಜನರ ಅಭಿಪ್ರಾಯದಂತೆ ಕೆಲಸ ಮಾಡಲಿ. ಜಿಲ್ಲಾಧಿಕಾರಿಯವರ ಈ ಪ್ರಕಟಣೆಗೆ ನಾವು ಒಪ್ಪುವುದಿಲ್ಲ, ಜಗ್ಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.

ಈಗಾಗಲೇ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರನ್ನು ಭೇಟಿ ಮಾಡಿರುವ ಧರಣಿನಿತರು ಅವರ ಮಾರ್ಗದರ್ಶನದಂತೆ ಹೋರಾಟ ಮುಂದುವರಿಸಿದ್ದಾರೆ. ಬೇಜವಾಬ್ದಾರಿಯುತ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಯು ನೋಡುತ್ತಿಲ್ಲ. ಬಡವರ ಹಕ್ಕುಗಳಿಗೆ ಬೆಲೆ ಇಲ್ಲವೇ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಸತಿ ವಂಚಿತರೊಂದಿಗೆ ಮಾತುಕತೆ ನಡೆಸಿ ಸೂಕ್ತ ಪರಿಹಾರವನ್ನು ಕಲ್ಪಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...