Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...