Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...