Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...