Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...