Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...