Homeಕರ್ನಾಟಕನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ...

ನಾವು ಮನುಷ್ಯರು- ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ…

- Advertisement -
- Advertisement -

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿದೆ. ಧರಣಿನಿರತರದ್ದು ಒಂದೇ ಪಟ್ಟು ಸಾಗುವಳಿ ಮಾಡಲು ಭೂಮಿ ಕೊಡಿ, ವಾಸ ಮಾಡಲು ಮನೆ ಕೊಡಿ. ನಮಗೆ ಭೂಮಿ ಇಲ್ಲ ಮನೆ ಇಲ್ಲ ಎಂದು ಪಟ್ಟುಹಿಡಿದ್ದಾರೆ.

ಇದರ ನಡುವೆಯೇ ನವೆಂಬರ್ 29ರಂದು ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಧರಣಿ ಕೈಬಿಡುವಂತೆ ಜಿಲ್ಲಾಧಿಕಾರಿ ಮಾಡಿದ ಮನವಿ ತಿರಸ್ಕರಿಸಿದರು. ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಿದರೆ ಮಾತ್ರ ಧರಣಿ ವಾಪಸ್ ಪಡೆಯುತ್ತೇವೆ ಎಂದು ಖಚಿತವಾಗಿ ಹೇಳಿದರು.

ಜಿಲ್ಲೆಯಲ್ಲಿ ಬಡವರು ಸಾಗುವಳಿ ಮಾಡುತ್ತಿರುವ ಭೂಮಿಯ ಕುರಿತು ಸಾಕಷ್ಟು ಗೊಂದಲಗಳು ಇವೆ. ಎರಡು ಎಕರೆಯಲ್ಲಿ ಉಳಿಮೆ ಮಾಡುತ್ತಿದ್ದರೆ, ಪಹಣಿಯಲ್ಲಿ ಮೂರು ಎಕರೆ ಎಂದು ನಮೂದಾಗಿದೆ. ಇದು ನಿಮ್ಮ ತಪ್ಪಲ್ಲ. ಕಂದಾಯ ಅಧಿಕಾರಿಗಳು ಮಾಡಿರುವ ತಪ್ಪು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ; ಓಟು ಕೊಡುವ ಜನರಿಗೆ ತುಂಡು ಭೂಮಿಯಿಲ್ಲ ಏಕೆ? ಎಚ್‌.ಎಸ್‌ ದೊರೆಸ್ವಾಮಿ ಪ್ರಶ್ನೆ…

ನೀವು ಮನವಿಗಳನ್ನು ಕೊಟ್ಟಿದ್ದೀರಿ. ಅವುಗಳನ್ನು ಪರಿಶೀಲಿಸಲು ಸಮಯಾವಕಾಶ ಬೇಕು. ಹಂತಹಂತವಾಗಿ ಪರಿಶೀಲಿಸುತ್ತೇವೆ. ನೀವು ಕೊಟ್ಟಿರುವ ಅರ್ಜಿಗಳನ್ನು ಪರಿಶೀಲಿಸಲು ವಿಭಾಗಾಧಿಕಾರಿಗಳು ಪ್ರತಿ ತಿಂಗಳ ನಮ್ಮ ಇಬ್ಬರು ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸುವಂತೆ ನಿರ್ದೇಶನ ನೀಡುತ್ತೇವೆ. ನಮಗೂ ಸಾಕಷ್ಟು ಕೆಲಸಗಳಿವೆ. ಪ್ರಧಾನ ಕಾರ್ಯದರ್ಶಿಗಳು ಬ್ಯುಸಿಯಾಗಿದ್ದಾರೆ. ಭೇಟಿ ಮಾಡಲು ಸಿಗುತ್ತಿಲ್ಲ. ಅವರೊಂದಿಗೆ ಮಾತುಕತೆ ನಡೆಸಬೇಕು. ಕಾಲವಕಾಶ ಕೊಡಿ, ಧರಣಿ ಸತ್ಯಾಗ್ರಹ ಕೈಬಿಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿ ಹೋರಾಟಗಾರ ನಾಗಭೂಷಣ್, ಮೂರು ವರ್ಷಗಳಿಂದಲು ಭೂಮಿ ಮತ್ತು ವಸತಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಹಲವು ಮನವಿಗಳನ್ನು ನೀಡಿದ್ದೇವೆ. ಕೇವಲ ಭರವಸೆ ಮಾತ್ರ ಸಿಕ್ಕಿದೆ. ಏನೂ ಕೆಲಸ ಆಗಿಲ್ಲ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಮೇಲೆ ನಮಗೆ ನಂಬಿಕೆ ಹೊರಟು ಹೋಗಿದ. ಹಾಗಾಗಿ ಪ್ರಧಾನ ಕಾರ್ಯದರ್ಶಿಗಳು ಸ್ಥಳಕ್ಕೆ ಬರಬೇಕು. ಲಿಖಿತ ಭರವಸೆ ನೀಡಬೇಕು. ಅಲ್ಲಿವರೆಗೂ ಶಾಂತಿಯುತವಾಗಿ ಧರಣಿ ನಡೆಸುತ್ತೇವೆ. ಆದರೆ ಜಿಲ್ಲಾಡಳಿತ ಧರಣಿಯನ್ನು ಹತ್ತಿಕ್ಕುವ ಕಲೆಸ ಮಾಡಬಾರದು ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಈ ಸಮಿತಿ ರಚನೆಯಾಗದೆ ಭೂಮಿ ಕೊಡಲು ಬರುವುದಿಲ್ಲ. 1990ರಿಂದ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಹೀಗಾಗಿ ವಿಳಂಬವಾಗುತ್ತಿದೆ. ಬ್ಯಾಲ್ಯದಲ್ಲಿ ಇರುವ ಗುಂಡುತೋಪಿನಲ್ಲಿ ನಿವೇಶನ ನೀಡಲು ತೊಂದರೆಯಿದೆ. ಕೆಲವರಿಗೆ ನಿವೇಶನಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2500 ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಲಾಗಿದೆ. ಫಾರಂ ನಂಬರ್ 50 ಮತ್ತು 53ರ ಅಡಿ ಅರ್ಜಿ ಸಲ್ಲಿಸಿರುವ ಜನರಿಗೆ ಭೂಮಿ ನೀಡಲು ಸಿದ್ದತೆಯಾಗಿದೆ. ಆದರೆ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ ಕುಂಟೆ, ಖರಾಬ್ ಭೂಮಿಯಲ್ಲಿ ನಿವೇಶನ ಮತ್ತು ಭೂಮಿ ಹಂಚಿಕೆ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಮಧುಗಿರಿ ಶಾಸಕರ ಕೋರಿಕೆಯ ಮೇರೆಗೆ ಬ್ಯಾಲ್ಯದಲ್ಲಿ ಕಾಲೇಜು ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇನ್ನು ಉಳಿದಂತೆ ಭೂಮಿ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ವಿವರಿಸಿದರು.

ಆದರೆ ಧರಣಿನಿರತರು ಪಟ್ಟು ಸಡಿಲಿಸಿಲ್ಲ. ಧರಣಿ ಮುಂದುವರಿಸಿದ್ದಾರೆ. ಈ ಸಮಸ್ಯೆ ಬಗೆಹರಿಯುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...