Homeಕರ್ನಾಟಕಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ...

ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ…

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ.

- Advertisement -
- Advertisement -

ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ವತಿಯಿಂದ ವೈಯಕ್ತಿಕ ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಎದುರು ನಡೆಯುತ್ತಿರುವ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹವು 5ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರೂಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕಾರಿಗಳು, ಧರಣಿ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರಾದರರೂ ಧರಣಿ ನಿರತರು ಬೇಡಿಕೆ ಈಡೇರುವವರೆಗೂ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿಯಾದ ನಂತರ 1972ರ ವನ್ಯಜೀವಿ ಕಾಯ್ದೆಯಂತೆ ಅರಣ್ಯ ಮತ್ತು ಅಣೆಕಟ್ಟುಗಳಿಂದ ಬಾಧಿತರಾದವರಿಗೆ ಪುನರ್ವಸತಿ ನೀಡಬೇಕಿದೆ. ಈ ಕುರಿತು ನಾವು ಮೇ ತಿಂಗಳಲ್ಲಿ ಚಳವಳಿ ಮಾಡಿದಾಗ ಪ್ರಿನ್ಸಿಪಲ್‌ ಸೆಕ್ರಟರಿಯಾದ ಕುಮಾರ್‌ ನಾಯಕ್‌‌ರವರ ನೇತೃತ್ವದಲ್ಲಿ ಸಭೆ ಆಯಿತು. ತುರ್ತಾಗಿ ಅನುಷ್ಠಾನ ಮಾಡುತ್ತೇವೆ ಎಂದರು. ಆದರೆ ಇಲ್ಲಿಯವರೆಗೂ ನಮ್ಮ ಸಮಸ್ಯೆಗಳು ಬಗೆಹರಿದಿಲ್ಲವೆಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಶೈಲೇಂದ್ರ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೋ ಓದಿ: ಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ – ವಿಡಿಯೋ ನೋಡಿ

ಅರಣ್ಯ ಹಕ್ಕು ಕಾಯ್ದೆಯನ್ನು ಪಂಚಾಯಿತಿ ಮತ್ತು ಉಪವಿಭಾಗ ಮಟ್ಟದಲ್ಲಿಯೂ ಪರಿಶೀಲನೆ ನಡೆಸಿ ಜಾರಿ ಮಾಡಬಹುದು. ಜಿಲ್ಲಾಧಿಕಾರಿಗಳು ಹಕ್ಕು ಪತ್ರ ನೀಡಬಹುದು. ಅರಣ್ಯದ ಒಳಗೆ ಇರುವವರು ಕೂಡ ಅವರು ಬದುಕುವ ವಿಚಾರಕ್ಕೆ ಭೂಮಿ ನೀಡುವಲ್ಲಿ ಈ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಅರಣ್ಯವನ್ನು ಖಾಸಗಿಯವರಿಗೆ ಗಣಿಗಾರಿಕೆ ಮತ್ತು ರೆಸಾರ್ಟ್‌ಗಾಗಿ ಬರೆದುಕೊಡಲು ಸರ್ಕಾರ ಸಿದ್ದವಾಗಿದೆ. ಇಲ್ಲಿ ಪಾರಂಪರಿಕವಾಗಿ ಬದುಕಿ ಬಂದ ಸಮುದಾಯಗಳಿದ್ದರೆ ಅದಕ್ಕೆ ಅವಕಾಶವಾಗುವುದಿಲ್ಲವೆಂದು ಅವರನ್ನು ಹೊರದಬ್ಬಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ. ನಮ್ಮ ಸಮುದಾಯಕ್ಕೆ ಸಾಮಾಜಿನ ನ್ಯಾಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತವನ್ನು ಎಚ್ಚರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತೇವೆ ಎಂದು ಶೈಲೇಂದ್ರ ಕುಮಾರ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...