Homeಕರ್ನಾಟಕಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ...

ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ…

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ.

- Advertisement -
- Advertisement -

ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ವತಿಯಿಂದ ವೈಯಕ್ತಿಕ ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಎದುರು ನಡೆಯುತ್ತಿರುವ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹವು 5ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರೂಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕಾರಿಗಳು, ಧರಣಿ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರಾದರರೂ ಧರಣಿ ನಿರತರು ಬೇಡಿಕೆ ಈಡೇರುವವರೆಗೂ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿಯಾದ ನಂತರ 1972ರ ವನ್ಯಜೀವಿ ಕಾಯ್ದೆಯಂತೆ ಅರಣ್ಯ ಮತ್ತು ಅಣೆಕಟ್ಟುಗಳಿಂದ ಬಾಧಿತರಾದವರಿಗೆ ಪುನರ್ವಸತಿ ನೀಡಬೇಕಿದೆ. ಈ ಕುರಿತು ನಾವು ಮೇ ತಿಂಗಳಲ್ಲಿ ಚಳವಳಿ ಮಾಡಿದಾಗ ಪ್ರಿನ್ಸಿಪಲ್‌ ಸೆಕ್ರಟರಿಯಾದ ಕುಮಾರ್‌ ನಾಯಕ್‌‌ರವರ ನೇತೃತ್ವದಲ್ಲಿ ಸಭೆ ಆಯಿತು. ತುರ್ತಾಗಿ ಅನುಷ್ಠಾನ ಮಾಡುತ್ತೇವೆ ಎಂದರು. ಆದರೆ ಇಲ್ಲಿಯವರೆಗೂ ನಮ್ಮ ಸಮಸ್ಯೆಗಳು ಬಗೆಹರಿದಿಲ್ಲವೆಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಶೈಲೇಂದ್ರ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೋ ಓದಿ: ಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ – ವಿಡಿಯೋ ನೋಡಿ

ಅರಣ್ಯ ಹಕ್ಕು ಕಾಯ್ದೆಯನ್ನು ಪಂಚಾಯಿತಿ ಮತ್ತು ಉಪವಿಭಾಗ ಮಟ್ಟದಲ್ಲಿಯೂ ಪರಿಶೀಲನೆ ನಡೆಸಿ ಜಾರಿ ಮಾಡಬಹುದು. ಜಿಲ್ಲಾಧಿಕಾರಿಗಳು ಹಕ್ಕು ಪತ್ರ ನೀಡಬಹುದು. ಅರಣ್ಯದ ಒಳಗೆ ಇರುವವರು ಕೂಡ ಅವರು ಬದುಕುವ ವಿಚಾರಕ್ಕೆ ಭೂಮಿ ನೀಡುವಲ್ಲಿ ಈ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಅರಣ್ಯವನ್ನು ಖಾಸಗಿಯವರಿಗೆ ಗಣಿಗಾರಿಕೆ ಮತ್ತು ರೆಸಾರ್ಟ್‌ಗಾಗಿ ಬರೆದುಕೊಡಲು ಸರ್ಕಾರ ಸಿದ್ದವಾಗಿದೆ. ಇಲ್ಲಿ ಪಾರಂಪರಿಕವಾಗಿ ಬದುಕಿ ಬಂದ ಸಮುದಾಯಗಳಿದ್ದರೆ ಅದಕ್ಕೆ ಅವಕಾಶವಾಗುವುದಿಲ್ಲವೆಂದು ಅವರನ್ನು ಹೊರದಬ್ಬಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ. ನಮ್ಮ ಸಮುದಾಯಕ್ಕೆ ಸಾಮಾಜಿನ ನ್ಯಾಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತವನ್ನು ಎಚ್ಚರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತೇವೆ ಎಂದು ಶೈಲೇಂದ್ರ ಕುಮಾರ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...