Homeಕರ್ನಾಟಕಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ...

ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಬುಡಕಟ್ಟು ಸಮುದಾಯಗಳ ಹೋರಾಟ 5ನೇ ದಿನಕ್ಕೆ…

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ.

- Advertisement -
- Advertisement -

ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ವತಿಯಿಂದ ವೈಯಕ್ತಿಕ ಅರಣ್ಯ ಹಕ್ಕು ಅನುಷ್ಠಾನಕ್ಕೆ ಒತ್ತಾಯಿಸಿ ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಎದುರು ನಡೆಯುತ್ತಿರುವ ಆಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹವು 5ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರೂಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕಾರಿಗಳು, ಧರಣಿ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರಾದರರೂ ಧರಣಿ ನಿರತರು ಬೇಡಿಕೆ ಈಡೇರುವವರೆಗೂ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿಯಾದ ನಂತರ 1972ರ ವನ್ಯಜೀವಿ ಕಾಯ್ದೆಯಂತೆ ಅರಣ್ಯ ಮತ್ತು ಅಣೆಕಟ್ಟುಗಳಿಂದ ಬಾಧಿತರಾದವರಿಗೆ ಪುನರ್ವಸತಿ ನೀಡಬೇಕಿದೆ. ಈ ಕುರಿತು ನಾವು ಮೇ ತಿಂಗಳಲ್ಲಿ ಚಳವಳಿ ಮಾಡಿದಾಗ ಪ್ರಿನ್ಸಿಪಲ್‌ ಸೆಕ್ರಟರಿಯಾದ ಕುಮಾರ್‌ ನಾಯಕ್‌‌ರವರ ನೇತೃತ್ವದಲ್ಲಿ ಸಭೆ ಆಯಿತು. ತುರ್ತಾಗಿ ಅನುಷ್ಠಾನ ಮಾಡುತ್ತೇವೆ ಎಂದರು. ಆದರೆ ಇಲ್ಲಿಯವರೆಗೂ ನಮ್ಮ ಸಮಸ್ಯೆಗಳು ಬಗೆಹರಿದಿಲ್ಲವೆಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಶೈಲೇಂದ್ರ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೋ ಓದಿ: ಚರಂಡಿ ಗುಂಡಿಯಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಲು ಹರಸಾಹಸ: ತುಮಕೂರಿನಲ್ಲೊಂದು ಆತಂಕದ ಘಟನೆ – ವಿಡಿಯೋ ನೋಡಿ

ಅರಣ್ಯ ಹಕ್ಕು ಕಾಯ್ದೆಯನ್ನು ಪಂಚಾಯಿತಿ ಮತ್ತು ಉಪವಿಭಾಗ ಮಟ್ಟದಲ್ಲಿಯೂ ಪರಿಶೀಲನೆ ನಡೆಸಿ ಜಾರಿ ಮಾಡಬಹುದು. ಜಿಲ್ಲಾಧಿಕಾರಿಗಳು ಹಕ್ಕು ಪತ್ರ ನೀಡಬಹುದು. ಅರಣ್ಯದ ಒಳಗೆ ಇರುವವರು ಕೂಡ ಅವರು ಬದುಕುವ ವಿಚಾರಕ್ಕೆ ಭೂಮಿ ನೀಡುವಲ್ಲಿ ಈ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಅರಣ್ಯವನ್ನು ಖಾಸಗಿಯವರಿಗೆ ಗಣಿಗಾರಿಕೆ ಮತ್ತು ರೆಸಾರ್ಟ್‌ಗಾಗಿ ಬರೆದುಕೊಡಲು ಸರ್ಕಾರ ಸಿದ್ದವಾಗಿದೆ. ಇಲ್ಲಿ ಪಾರಂಪರಿಕವಾಗಿ ಬದುಕಿ ಬಂದ ಸಮುದಾಯಗಳಿದ್ದರೆ ಅದಕ್ಕೆ ಅವಕಾಶವಾಗುವುದಿಲ್ಲವೆಂದು ಅವರನ್ನು ಹೊರದಬ್ಬಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿ.ಬಿ ಕುಪ್ಪೆಯಲ್ಲಿ 11 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಎಚ್‌.ಕೋಟೆಯಲ್ಲಿ 10 ದಿನ ಪ್ರತಿಭಟಿಸಿದ್ದೇವೆ. ಈಗ ಪಿರಿಯಾಪಟ್ಟಣದಲ್ಲಿ ಕಳೆದ 5 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಜನಪ್ರತಿನಿಧಿಗಳಿಗೆ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಸಲು ಹೋರಾಟವನ್ನು ಜೀವಂತವಿಟ್ಟಿದ್ದೇವೆ. ನಮ್ಮ ಸಮುದಾಯಕ್ಕೆ ಸಾಮಾಜಿನ ನ್ಯಾಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತವನ್ನು ಎಚ್ಚರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತೇವೆ ಎಂದು ಶೈಲೇಂದ್ರ ಕುಮಾರ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...