ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಜನಸುರಾಜ್ ಪಕ್ಷದ ನೇತೃತ್ವದಲ್ಲಿ ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಿತು.
ನೌಕರರು, ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನಲ್ಲಿ ನೆಲೆಸಿರುವ ಬಿಹಾರ ಮೂಲದ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಿಹಾರದಲ್ಲಿ ಈಗ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ತಾತ್ಕಾಲಿಕವಾಗಿ ರಾಜ್ಯದಿಂದ ಹೊರಗಿರುವ ಮತದಾರರ ವಿವರವು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದರಿಂದ ಅನೇಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಹಾಗಾಗಿ, ಇದು ನಡೆಯಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
“ಬಿಹಾರದಿಂದ ಬಂದ ವಲಸಿಗರು ಬಿಹಾರದ ಮತದಾರರೇ”, “ಬಿಹಾರದ ನೆಲದಿಂದ ದೂರ ಇದ್ದೇವೆ ಬಿಹಾರದಿಂದ ಅಲ್ಲ”, “ವಲಸಿಗರ ಮತ ಬಿಹಾರದ ಹಕ್ಕಿನ ಧ್ವನಿ” ಇತ್ಯಾದಿ ಭಿತ್ತಿ ಪತ್ರಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.
ಪ್ರತಿಭಟನೆ ಬಳಿಕ ಕೆ.ಆರ್ ಸರ್ಕಲ್ ಬಳಿ ಇರುವ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಅಸ್ಸಾಂನಲ್ಲಿ ಬಿಜೆಪಿ ಬಂಗಾಳಿ ಭಾಷಿಕರಿಗೆ ಬೆದರಿಸುತ್ತಿದೆ: ಮಮತಾ ಬ್ಯಾನರ್ಜಿ ಆಕ್ರೋಶ


