ದೆಹಲಿಯ ಹಳೆಯ ನಂಗಲ್ ಸ್ಮಶಾನದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಮತ್ತು ಪೋಷಕರ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಿದ ಪ್ರಕರಣ ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಶನಿವಾರ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿತು.
ನೀರಿಗಾಗಿ ಮನೆಯ ಮುಂದಿದ್ದ ಚಿತಾಗಾರಕ್ಕೆ ತೆರಳಿದ್ದ ದೆಹಲಿಯ ನಂಗಲ್ ಎಂಬ ಹಳ್ಳಿಯ 9 ವರ್ಷದ ದಲಿತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿತ್ತು.
ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ
ದೆಹಲಿಯ ಅತ್ಯಾಚಾರ, ಕೊಲೆ ಖಂಡಿಸಿ, ಸಂಘಟನೆಯ 50 ಜನ ಸದಸ್ಯರು ಸಾಂಕೇತಿಕವಾಗಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ಬಳಿ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಾಂತಿಯುತ ಪ್ರತಿಭಟನಾ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒಕ್ಕೂಟ ಗುರುವಾರದಂದು ಪತ್ರಿಕಾ ಹೇಳಿಕೆ ನೀಡಿತ್ತು.
ಪ್ರತಿಭಟನೆ ನಿಗದಿಯಾದಂತೆ ಮೌರ್ಯ ಸರ್ಕಲ್ನಲ್ಲಿ ನಡೆದಿದ್ದು ಅದರ ರೆಕಾರ್ಡೆಡ್ ಲೈವ್ ಅನ್ನು ಇಲ್ಲಿ ನೋಡಬಹುದಾಗಿದೆ. ಇದನ್ನೂ ಓದಿ: ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ
ಇದನ್ನೂ ಓದಿ: ಆತ ಮಸಣದ ಅರ್ಚಕ! ಅತ್ಯಾಚಾರ ಮಾಡಿ ಹೆಣ ಸುಟ್ಟುಹಾಕಿದ- ಬಿ. ಪೀರ್ ಬಾಷ