Homeಕರ್ನಾಟಕಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ಶಿಫಾರಸ್ಸಿನಂತೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ನಿಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ತಮ್ಮ ಹೋರಾಟವನ್ನು ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸಿದವು.

ಇಷ್ಟು ದಿನ ರಾಜ್ಯಕ್ಕೆ ಸೀಮಿತವಾಗಿದ್ದ ಹೋರಾಟವನ್ನು ಇದೀಗ ರಾಷ್ಟ್ರ ರಾಜಧಾನಿಗೆ ವಿಸ್ತರಿಸಿದ್ದಾರೆ. ಅಲೆಮಾರಿಗಳ ಹೋರಾಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು, ಅಲೆಮಾರಿಗಳು ಅನಿವಾರ್ಯವಾಗಿ ‘ದೆಹಲಿ ಚಲೋ’ ಹಮ್ಮಿಕೊಂಡಿದ್ದರು. ತಮ್ಮ ಹೋರಾಟದ ಭಾಗವಾಗಿ ಇಂದು ಕಾಂಗ್ರೆಸ್‌ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ಅಲೆಮಾರಿ ಹೋರಾಟದ ನಿಯೋಗ, ಪ್ರತ್ಯೇಕ ಮೀಸಲಾತಿಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

 

ನವದೆಹಲಿಯ ಪ್ರಸಿದ್ಧ ⁠ಜಂತರ್ ಮಂತರ್‌ನಲ್ಲಿ ಅಲೆಮಾರಿಗಳು ವಿಶಿಷ್ಠ ಮತ್ತು ಆಕ್ರೋಶಭರಿತರಾಗಿ ಪ್ರತಿಭಟಿಸಿದರು. ದೆಹಲಿಯ ⁠ಕಾಂಗ್ರೆಸ್ ಪ್ರಧಾನ ಕಚೇರಿಯ ಮುಂದೆ ಸಹ ಅಲೆಮಾರಿಗಳು ತಮ್ಮ ಪ್ರದರ್ಶನ ನೀಡಿದರು. ಅಲೆಮಾರಿ ನಿಯೋಗದ ಜೊತೆಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡರು, ⁠ಸಮಸ್ಯೆ ಬಗೆಹರಿಸುವ ಪ್ರಕ್ರಿಯೆ ಕುರಿತು ತೀರ್ಮಾನ ತಗೆದುಕೊಳ್ಳಲು ಸಮಯ ಕೇಳಿದ್ದಾರೆ ಎಂದು ಹೋರಾಟಗಾರರು ಮಾಹಿತಿ ನೀಡಿದ್ದಾರೆ.

ನ್ಯಾ. ನಾಗಮೋಹನ್​ ದಾಸ್ ಅವರು ತಮ್ಮ ವರದಿಯಲ್ಲಿ​ ಅಲೆಮಾರಿಗಳು ಮೊದಲ ಆದ್ಯತೆ ನೀಡಿ, ಶೇ.1 ಪ್ರತ್ಯೇಕ ಮೀಸಲಾತಿ ಶಿಫಾರಸ್ಸು ಮಾಡಿದ್ದರು. ಜೊತೆಗೆ, ಪರಿಶಿಷ್ಟ ಸಮುದಾಯವನ್ನ ಐದು ವಿಭಾಗಗಳಾಗಿ ವಿಂಗಡಿಸಿದ್ದರು. ಆದರೆ, ಪರಿಶಿಷ್ಠ ಜಾತಿ ಪಟ್ಟಿಯಲ್ಲಿರುವ ಸ್ಪೃಶ್ಯ ಸಮುದಾಯದ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಮೂರು ವಿಭಾಗ ಮಾಡಿದ್ದರು. ಅಲೆಮಾರಿಗಳಿಗೆ ಶಿಫಾರಸ್ಸು ಮಾಡಿದ್ದ ಶೇ.1 ನ್ನು ಲಂಬಾಣಿ, ಭೋವಿ, ಕೊರಷ-ಕೊರಮ ಜಾತಿಗಳಂತ ಪ್ರಬಲ ಸಮುದಾಯ ಜೊತೆಗೆ ಸೇರಿಸಿದ್ದರು. ಇದನ್ನು ವಿರೋಧಿಸಿ 59 ಅಲೆಮಾರಿ ಸಮುದಾಯಗಳು ಹೋರಾಟ ನಡೆಸುತ್ತಿವೆ.

“ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆರೋಗವು, ವರ್ಗ 1: ಅತ್ಯಂತ ಹಿಂದುಳಿದ ಅಲೆಮಾರಿ ಜಾತಿಗಳು – 1% ಮೀಸಲಾತಿ, ವರ್ಗ 2: ಹೆಚ್ಚು ಹಿಂದುಳಿದ ಮಾದಿಗರು ಮತ್ತು ಸಂಬಂಧಿತ ಜಾತಿಗಳು – 6% ಮೀಸಲಾತಿ, ವರ್ಗ 3: ಹಿಂದುಳಿದ ಹೊಲಯರು ಮತ್ತು ಸಂಬಂಧಿತ ಜಾತಿಗಳು – 5% ಮೀಸಲಾತಿ, ವರ್ಗ 4: ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಚ ಹಾಗೂ ಸಂಬಂಧಿತ ಜಾತಿಗಳು – 4% ಮೀಸಲಾತಿ, ವರ್ಗ 5: ತಮ್ಮನ್ನು AK, AD ಹಾಗೂ AA ಎಂದು ಗುರುತಿಸಿಕೊಳ್ಳುವ ಇತರ ಜಾತಿಗಳು – 1% ಮೀಸಲಾತಿ ಹಂಚಿಕೆ ಮಾಡಬೇಕೆಂದು ಶಿಫಾರಸು ಮಾಡಿತ್ತು. ಆದರೆ, ಸರ್ಕಾರವು ಕೆಲವು ಸಂಪುಟ ಸಚಿವರ ಒತ್ತಡಕ್ಕೆ ಮಣಿದು, ಪ್ರಬಲ ರಾಜಕೀಯ ಲಾಬಿಗಳ ಬೇಡಿಕೆಗಳನ್ನು ಪೂರೈಸುವ ಆತುರದಲ್ಲಿ, ದಲಿತ ಅಲೆಮಾರಿ ಸಮುದಾಯವನ್ನು ಬಲಿಯ ಕುರಿಯನ್ನಾಗಿ ಮಾಡಲಾಗಿದೆ. ಹೆಚ್ಚು ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಕಡಿಮೆ ಹಿಂದುಳಿದ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಗಿದೆ. ಇದು ರಾಜಕೀಯ ಅಪರಾಧ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...