Homeಕರ್ನಾಟಕಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ; ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದ ಅಲೆಮಾರಿಗಳು

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ಶಿಫಾರಸ್ಸಿನಂತೆ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿ ನಿಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ತಮ್ಮ ಹೋರಾಟವನ್ನು ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಸಿದವು.

ಇಷ್ಟು ದಿನ ರಾಜ್ಯಕ್ಕೆ ಸೀಮಿತವಾಗಿದ್ದ ಹೋರಾಟವನ್ನು ಇದೀಗ ರಾಷ್ಟ್ರ ರಾಜಧಾನಿಗೆ ವಿಸ್ತರಿಸಿದ್ದಾರೆ. ಅಲೆಮಾರಿಗಳ ಹೋರಾಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು, ಅಲೆಮಾರಿಗಳು ಅನಿವಾರ್ಯವಾಗಿ ‘ದೆಹಲಿ ಚಲೋ’ ಹಮ್ಮಿಕೊಂಡಿದ್ದರು. ತಮ್ಮ ಹೋರಾಟದ ಭಾಗವಾಗಿ ಇಂದು ಕಾಂಗ್ರೆಸ್‌ ಪಕ್ಷದ ಉನ್ನತ ನಾಯಕರನ್ನು ಭೇಟಿಯಾದ ಅಲೆಮಾರಿ ಹೋರಾಟದ ನಿಯೋಗ, ಪ್ರತ್ಯೇಕ ಮೀಸಲಾತಿಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

 

ನವದೆಹಲಿಯ ಪ್ರಸಿದ್ಧ ⁠ಜಂತರ್ ಮಂತರ್‌ನಲ್ಲಿ ಅಲೆಮಾರಿಗಳು ವಿಶಿಷ್ಠ ಮತ್ತು ಆಕ್ರೋಶಭರಿತರಾಗಿ ಪ್ರತಿಭಟಿಸಿದರು. ದೆಹಲಿಯ ⁠ಕಾಂಗ್ರೆಸ್ ಪ್ರಧಾನ ಕಚೇರಿಯ ಮುಂದೆ ಸಹ ಅಲೆಮಾರಿಗಳು ತಮ್ಮ ಪ್ರದರ್ಶನ ನೀಡಿದರು. ಅಲೆಮಾರಿ ನಿಯೋಗದ ಜೊತೆಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡರು, ⁠ಸಮಸ್ಯೆ ಬಗೆಹರಿಸುವ ಪ್ರಕ್ರಿಯೆ ಕುರಿತು ತೀರ್ಮಾನ ತಗೆದುಕೊಳ್ಳಲು ಸಮಯ ಕೇಳಿದ್ದಾರೆ ಎಂದು ಹೋರಾಟಗಾರರು ಮಾಹಿತಿ ನೀಡಿದ್ದಾರೆ.

ನ್ಯಾ. ನಾಗಮೋಹನ್​ ದಾಸ್ ಅವರು ತಮ್ಮ ವರದಿಯಲ್ಲಿ​ ಅಲೆಮಾರಿಗಳು ಮೊದಲ ಆದ್ಯತೆ ನೀಡಿ, ಶೇ.1 ಪ್ರತ್ಯೇಕ ಮೀಸಲಾತಿ ಶಿಫಾರಸ್ಸು ಮಾಡಿದ್ದರು. ಜೊತೆಗೆ, ಪರಿಶಿಷ್ಟ ಸಮುದಾಯವನ್ನ ಐದು ವಿಭಾಗಗಳಾಗಿ ವಿಂಗಡಿಸಿದ್ದರು. ಆದರೆ, ಪರಿಶಿಷ್ಠ ಜಾತಿ ಪಟ್ಟಿಯಲ್ಲಿರುವ ಸ್ಪೃಶ್ಯ ಸಮುದಾಯದ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಮೂರು ವಿಭಾಗ ಮಾಡಿದ್ದರು. ಅಲೆಮಾರಿಗಳಿಗೆ ಶಿಫಾರಸ್ಸು ಮಾಡಿದ್ದ ಶೇ.1 ನ್ನು ಲಂಬಾಣಿ, ಭೋವಿ, ಕೊರಷ-ಕೊರಮ ಜಾತಿಗಳಂತ ಪ್ರಬಲ ಸಮುದಾಯ ಜೊತೆಗೆ ಸೇರಿಸಿದ್ದರು. ಇದನ್ನು ವಿರೋಧಿಸಿ 59 ಅಲೆಮಾರಿ ಸಮುದಾಯಗಳು ಹೋರಾಟ ನಡೆಸುತ್ತಿವೆ.

“ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆರೋಗವು, ವರ್ಗ 1: ಅತ್ಯಂತ ಹಿಂದುಳಿದ ಅಲೆಮಾರಿ ಜಾತಿಗಳು – 1% ಮೀಸಲಾತಿ, ವರ್ಗ 2: ಹೆಚ್ಚು ಹಿಂದುಳಿದ ಮಾದಿಗರು ಮತ್ತು ಸಂಬಂಧಿತ ಜಾತಿಗಳು – 6% ಮೀಸಲಾತಿ, ವರ್ಗ 3: ಹಿಂದುಳಿದ ಹೊಲಯರು ಮತ್ತು ಸಂಬಂಧಿತ ಜಾತಿಗಳು – 5% ಮೀಸಲಾತಿ, ವರ್ಗ 4: ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಚ ಹಾಗೂ ಸಂಬಂಧಿತ ಜಾತಿಗಳು – 4% ಮೀಸಲಾತಿ, ವರ್ಗ 5: ತಮ್ಮನ್ನು AK, AD ಹಾಗೂ AA ಎಂದು ಗುರುತಿಸಿಕೊಳ್ಳುವ ಇತರ ಜಾತಿಗಳು – 1% ಮೀಸಲಾತಿ ಹಂಚಿಕೆ ಮಾಡಬೇಕೆಂದು ಶಿಫಾರಸು ಮಾಡಿತ್ತು. ಆದರೆ, ಸರ್ಕಾರವು ಕೆಲವು ಸಂಪುಟ ಸಚಿವರ ಒತ್ತಡಕ್ಕೆ ಮಣಿದು, ಪ್ರಬಲ ರಾಜಕೀಯ ಲಾಬಿಗಳ ಬೇಡಿಕೆಗಳನ್ನು ಪೂರೈಸುವ ಆತುರದಲ್ಲಿ, ದಲಿತ ಅಲೆಮಾರಿ ಸಮುದಾಯವನ್ನು ಬಲಿಯ ಕುರಿಯನ್ನಾಗಿ ಮಾಡಲಾಗಿದೆ. ಹೆಚ್ಚು ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಕಡಿಮೆ ಹಿಂದುಳಿದ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಗಿದೆ. ಇದು ರಾಜಕೀಯ ಅಪರಾಧ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...