Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...