Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...