Homeಮುಖಪುಟ18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; 'ದೇವ ದೀಪಾವಳಿ' ಹೆಸರಿನಲ್ಲಿ ಬಲಪಂಥೀಯ ಗುಂಪಿನ...

18 ನೇ ಶತಮಾನದ ಇಸ್ಲಾಮಿಕ್ ಸಮಾಧಿ ಮುಂದೆ ಪ್ರತಿಭಟನೆ; ‘ದೇವ ದೀಪಾವಳಿ’ ಹೆಸರಿನಲ್ಲಿ ಬಲಪಂಥೀಯ ಗುಂಪಿನ ಆಟಾಟೋಪ

- Advertisement -
- Advertisement -

ಕಾನೂನು ಪಾಲಕರೊಂದಿಗೆ ಅನುಚಿತವಾಗಿ ವರ್ತಿಸಿ ಶಾಂತಿ ಕದಡಿದ, ಇಸ್ಲಾಮಿಕ್ ಸ್ಮಾರಕವನ್ನು ರಕ್ಷಿಸುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರದಲ್ಲಿ ಕೇಸರಿ ವಸ್ತ್ರಧಾರಿಗಳಾಗಿದ್ದ 20 ಜನ ಮಹಿಳೆಯರ ವಿರುದ್ಧ ಗುರುವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದೇವ ದೀಪಾವಳಿ ಆಚರಿಸುವ ಹೆಸರಿನಲ್ಲಿ ಬುಧವಾರ ಸಂಜೆ ಅಬುನಗರ ರೆಡೈಯಾ ಮೊಹಲ್ಲಾದಲ್ಲಿರುವ 18 ನೇ ಶತಮಾನದ ಸಮಾಧಿಯಾದ ಮಕ್ಬರಾ-ಎ-ಸಂಗಿ ಮುಂದೆ ಕೆಲವು ಸ್ಥಳೀಯ ಬಿಜೆಪಿ ಸದಸ್ಯರೊಂದಿಗೆ ಮಹಿಳೆಯರು ಜಮಾಯಿಸಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಘಟನೆಯ ವೀಡಿಯೊದಲ್ಲಿ, ಮಹಿಳೆಯರು ಕರ್ತವ್ಯದಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಅನ್ನು ಮುರಿಯಲು ಪ್ರಯತ್ನಿಸುತ್ತಿದ್ದು, ಮಕ್ಬರಾ ಒಳಗೆ ಪ್ರವೇಶಿಸಲು ಪೊಲೀಸರಿಗೆ ಧಮಕಿ ಹಾಕುತ್ತಿರುವುದನ್ನು ಕಾಣಬಹುದು.

ಅವರು ಸ್ಮಾರಕದ ಮುಂದೆ ದೀಪಗಳನ್ನು ಬೆಳಗಿಸಿ, ಪ್ರತಿ ವರ್ಷ ಅಲ್ಲಿ ದೇವ ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಪೊಲೀಸರು ಮತ್ತು ಸಮಾಧಿ ಸಮಿತಿ ಸದಸ್ಯರು “ಬಿಜೆಪಿ ಮಹಿಳೆಯರು ಇಲ್ಲಿ ಹಿಂದೂ ಹಬ್ಬವನ್ನು ಆಚರಿಸಲು ಪ್ರಯತ್ನಿಸಿದ್ದಾರೆ” ಎಂದು ಹೇಳಿದರು.

ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ತಾರಕೇಶ್ವರ ರೈ, “ಮಹಿಳೆಯರು ಪೊಲೀಸರೊಂದಿಗೆ ಕೆಟ್ಟದಾಗಿ ವರ್ತಿಸಿದರು. ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದರು. ನಾವು ಅವರನ್ನು ಮನೆಯಲ್ಲಿ ಪೂಜೆ ಮಾಡಲು ಕೇಳಿಕೊಂಡೆವು, ಬೇರೆಯವರು ನಂಬುವ ಧಾರ್ಮಿಕ ಸ್ಥಳದಲ್ಲಿ ಹೊಸ ಸಂಪ್ರದಾಯವನ್ನು ಪ್ರಾರಂಭಿಸಲು ನಾವು ಅವರಿಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವವರೆಗೆ ಸ್ತಳದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದರು.

ಜಿಲ್ಲಾಧ್ಯಕ್ಷ ಮುಖಲಾಲ್ ಪಾಲ್ ಸೇರಿದಂತೆ ಕೆಲವು ಬಿಜೆಪಿ ನಾಯಕರು ಆಗಸ್ಟ್ 11 ರಂದು ಮಕ್ಬರಾಕ್ಕೆ ನುಗ್ಗಿ, ಆರ್‌ಎಸ್‌ಎಸ್ ಧ್ವಜವನ್ನು ಇರಿಸಿದ್ದರು. ನಂತರ, ಬಿಜೆಪಿ ನಾಯಕರು ಸ್ಥಾಪಿಸಿದ್ದಾರೆ ಎನ್ನಲಾದ ಮಠ-ಮದೀರ್ ಸಂಘರ್ಷ ಸಮಿತಿ ಎಂಬ ಸಂಘಟನೆಯು, ಇಸ್ಲಾಮಿಕ್ ದೇವಾಲಯವು ಹಿಂದೆ ಹಿಂದೂ ದೇವಾಲಯವಾಗಿತ್ತು ಎಂಬ ಹೇಳಿಕೆಯ ಮೇರೆಗೆ ಅದನ್ನು ತನ್ನ ವಶಕ್ಕೆ ಪಡೆಯುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ನವೆಂಬರ್ 12 ರಂದು ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.

ಆ ಸಮಯದಲ್ಲಿ ಪೊಲೀಸರು ಗುರುತಿಸಲಾದ ಅರ್ಧ ಡಜನ್ ಮತ್ತು 150 ಜನ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

“ಮಕ್ಬರಾ ಠಾಕೂರ್ ದ್ವಾರವಾಗಿದ್ದು, 2012 ರವರೆಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸುತ್ತಿದ್ದ ಶ್ರೀಕೃಷ್ಣನ ದೇವಾಲಯವಾಗಿದೆ” ಎಂದು ಪಾಲ್ ಹೇಳಿಕೊಂಡಿದ್ದಾರೆ. ಮುಸ್ಲಿಮರು ಕಟ್ಟಡವನ್ನು ವಶಪಡಿಸಿಕೊಂಡು, ಅಂದಿನ ಆಡಳಿತವು ‘ಅತಿಕ್ರಮಣಕಾರರ’ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳುತ್ತಾರೆ.

ಆದರೆ, ಸ್ಥಳೀಯರು ಕಳೆದ ಹಲವು ವರ್ಷಗಳಿಂದ ಮಕ್ಬರಾವನ್ನು ನೋಡುತ್ತಿದ್ದೇವೆ ಎಂದು ಹೇಳುತ್ತಾರೆ. ಪುರಾತನ ಸಮಾಧಿಯ ನೌಕರರು ಇದು 200 ವರ್ಷಗಳಿಗೂ ಹೆಚ್ಚು ಕಾಲದಿಂದ ಅಲ್ಲಿಯೇ ಇದೆ ಎಂದು ಹೇಳುತ್ತಾರೆ.

ಸ್ಥಳೀಯ ಆಡಳಿತವು ಸಿದ್ಧಪಡಿಸಿದ ವರದಿಯ ಪ್ರಕಾರ, ಪಕ್ಕಪಕ್ಕದಲ್ಲಿರುವ 753 ಮತ್ತು 1159 ಪ್ಲಾಟ್ ಸಂಖ್ಯೆಗಳನ್ನು ಕ್ರಮವಾಗಿ ಮಕ್ಬರಾ ಮತ್ತು ಠಾಕೂರ್ಜಿಗೆ ದೇವಾಲಯದ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಎರಡು ಆಸ್ತಿಗಳ ಬಗ್ಗೆ ಗೊಂದಲ ಉಂಟಾಗಲು ಇದೇ ಕಾರಣ. ಮಕ್ಬರಾ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ.

ಆಸ್ತಿಯ ಮುತ್ತವಾಲಿ (ಮೇಲ್ವಿಚಾರಕ) ಅಬ್ದುಲ್ ಅಜೀಜ್, “ಗಲಭೆಕೋರರ ವಿರುದ್ಧ ನಾವು ಯಾವುದೇ ಕ್ರಮವನ್ನು ನಿರೀಕ್ಷಿಸುವುದಿಲ್ಲ. ಪ್ರಸ್ತುತ, ಇಡೀ ಪ್ರದೇಶವನ್ನು ಬ್ಯಾರಿಕೇಡ್ ಮಾಡಲಾಗಿದೆ, ಪೊಲೀಸರು ಸುತ್ತುವರೆದಿದ್ದಾರೆ. ಮುಸ್ಲಿಮರು ಸಹ ಅಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿಲ್ಲ” ಎಂದು ಹೇಳಿದರು.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...