Homeಕರ್ನಾಟಕದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

ದೇವನಹಳ್ಳಿಯಲ್ಲಿ ರೈತರು, ಹೋರಾಟಗಾರರ ಬಂಧನ: ಇಂದು ಸಿಎಂ ಮನೆ ಮುಂದೆ ಪ್ರತಿಭಟನೆ

- Advertisement -
- Advertisement -

ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು ಮತ್ತು ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ, ಇಂದು (ಜೂನ್, 26) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟಿಸಲು ನಿರ್ಧರಿಸಲಾಗಿದೆ.

ನಟರಾದ ಪ್ರಕಾಶ್ ರಾಜ್, ಚೇತನ್ ಅಹಿಂಸಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಹೋರಾಟಗಾರ್ತಿ ವಿಜಯಮ್ಮ ಸೇರಿದಂತೆ ಪ್ರಮುಖ ಸಾಹಿತಿಗಳು, ಚಿಂತಕರು ಮತ್ತು ಬುದ್ಧಿಜೀವಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ವಿವಿಧ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಈ ಪ್ರತಿಭಟನೆಯನ್ನು ಬೆಂಬಲಿಸಿವೆ.

ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಪ್ರತಿಭಟನೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

ಮುಂದಿನ ನಡೆ ಬಗ್ಗೆ ಪತ್ರಿಕಾಗೋಷ್ಠಿ

ಹೋರಾಟ ನಿರತ ರೈತರು, ಹೋರಾಟಗಾರರನ್ನು ಬಂಧಿಸಿದ ಪೊಲೀಸರ ನಡೆ ಖಂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, ಸಂಯುಕ್ತ ಹೋರಾಟ ಕರ್ನಾಟ ಸೇರಿದಂತೆ ಹೋರಾಟದ ನೇತೃತ್ವ ವಹಿಸಿರುವ ಸಂಘಟನೆಗಳು ಇಂದು ಪತ್ರಿಕಾಗೋಷ್ಠಿ ಕರೆದಿವೆ.

ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ದೇವನಹಳ್ಳಿ ಹೋರಾಟದ ಮುಂದಿನ ಹಂತಗಳನ್ನು ಈ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ರೈತರು, ಹೋರಾಟಗಾರರನ್ನು ಅಮಾನುಷವಾಗಿ ಬಂಧಿಸಿರುವುದನ್ನು ಖಂಡಿಸಿ ಇಂದು (ಜೂ.26) ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರೆ ಕೊಟ್ಟಿದೆ. ಹಾಗಾಗಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ.

ರೈತರು, ಹೋರಾಟಗಾರರ ಜೊತೆ ಅಮಾನುಷವಾಗಿ ವರ್ತಿಸಿದ ಡಿಎಸ್‌ಪಿ ಸಜಿತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿ ಕೈ ಬಿಡಬೇಕು. ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಹಳ್ಳಿಗಳ ರೈತರ ಸುಮಾರು 1700 ಎಕರೆಗೂ ಹೆಚ್ಚು ಕೃಷಿ ಭೂಮಿಯ ಸ್ವಾಧೀನಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಮುಂದಾಗಿದೆ. ಇದನ್ನು ವಿರೋಧಿಸಿ ಕಳೆದ 1,180 ದಿನಗಳಿಂದ ರೈತರು ನಿರಂತರ ಹೋರಾಟ ನಡೆಸುತ್ತಿದ್ದರು.

ಹೋರಾಟದ ನಿರ್ಣಾಯಕ ಹಂತವಾಗಿ ನಿನ್ನೆ (ಜೂನ್ 25, ಬುಧವಾರ) ದೇವನಹಳ್ಳಿ ಪಟ್ಟಣದಲ್ಲಿ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಸಂಜೆಯವರೆಗೆ ಶಾಂತಿಯುತವಾಗಿ ಸಮಾವೇಶ ನಡೆದಿತ್ತು. ಆದರೆ, ಸಂಜೆ 5 ಗಂಟೆಯ ಬಳಿಕ ಹೋರಾಟ ಮುಂದುವರಿಸಲು ಅವಕಾಶ ನಿರಾಕರಿಸಿದ ಪೊಲೀಸರು ರೈತರು, ವಿವಿಧ ಸಂಘಟನೆಗಳ ಮುಖಂಡರು, ವೃದ್ದರು, ಮಹಿಳೆಯರನ್ನು ಬಂಧಿಸಿದ್ದರು.

ಬಂಧಿತರ ಬಿಡುಗಡೆ

ನಮ್ಮನ್ನು ಬಂಧಿಸಿದರೆ ಜಾಮೀನು ಪಡೆಯುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದರು. ಆದರೆ, ಬಂಧಿತ ಎಲ್ಲರನ್ನು ತಡರಾತ್ರಿ ಬಿಡುಗಡೆ ಮಾಡಲಾಗಿದೆ. ದೇವನಹಳ್ಳಿಯಲ್ಲಿ ಬಂಧಿಸಿ ಕರೆದೊಯ್ದು ಹೆಗ್ಗಡೆ ನಗರ ಪೊಲೀಸ್ ಮೈದಾನದಲ್ಲಿ ಬಿಡಲಾಗಿತ್ತು. ಎಲ್ಲರೂ ಅಲ್ಲಿಯೇ ತಡರಾತ್ರಿವರೆಗೆ ಪ್ರತಿಭಟನೆ ಮುಂದುವರಿಸಿದ್ದರು.

ರೈತರ ಒತ್ತಾಯಕ್ಕೆ ಸಿದ್ದರಾಮಯ್ಯ ಮಣಿಯಲೇಬೇಕು : ನಗರಗೆರೆ ರಮೇಶ್

ರಾಜ್ಯದ ವಿವಿಧ ಪ್ರದೇಶಗಳಿಗೆ ಹರಡುತ್ತಿರುವ ರೈತರ ಹೋರಾಟದ ಕಿಚ್ಚನ್ನು ಗಮನಿಸಿಯಾದರೂ, ಎಂ.ಬಿ ಪಾಟೀಲ್ ಅವರಂತಹ ಕಾರ್ಪೊರೇಟ್ ಕುಳಗಳ ದಾಸರ ಮಾತನ್ನು ಪಕ್ಕಕ್ಕೆ ಸರಿಸಿ ಹಿಂದೆ ತಾವೇ ನೀಡಿದ ಮಾತಿನಂತೆ ಈಗ ರೈತರ ಒತ್ತಾಯಕ್ಕೆ ಸಿದ್ದರಾಮಯ್ಯನವರು ಮಣಿಯಲೇ ಬೇಕಾಗಿದೆ. ಇಲ್ಲವಾದಲ್ಲಿ ಅವಕಾಶವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಅವರ ಹೆಸರೂ ಸೇರಿಕೊಂಡು ರಾಜ್ಯದಲ್ಲಿ ಕೆಟ್ಟ ಚರಿತ್ರೆಯ ಹುಟ್ಟಿಗೆ ಕಾರಣರಾದರೆಂದೇ ಜನರ ನೆನಪಿನಲ್ಲಿ ಉಳಿಯುತ್ತಾರೆ. ಈ ವಿಷಯವನ್ನು ಅವರನ್ನು ಸುತ್ತುವರೆದಿರುವ ರಾಜಕಾರಣಿಗಳು ಅವರಿಗೆ ಅರ್ಥ ಮಾಡಿಸುವುದಿಲ್ಲ. ಅವರಿಗೇ ಪ್ರಬುದ್ಧತೆ ಇದ್ದರೆ ಅರ್ಥ ಮಾಡಿಕೊಳ್ಳಬೇಕು. ಪಕ್ಷದೊಳಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಗರಂ ಆಗಿರುವ ಹೈಕಮಾಂಡ್‌ಗೆ ರಾಜ್ಯದ ರಾಜಧಾನಿಯ ಸಮೀಪವೇ ನಡೆಯುತ್ತಿರುವ ರೈತರ ಹೋರಾಟ ಗಮನಕ್ಕೆ ಬರಲಿಲ್ಲವೇ? ಇಲ್ಲವೆಂದರೆ, ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಎಷ್ಟು ಆಳವಾಗಿ ಬೇರೂರಿದೆ ಅನ್ನುವುದು ಪ್ರಗಾಢವಾಗಿ ಪ್ರದರ್ಶಿತವಾಗುತ್ತದೆ ಎಂದು ಪ್ರಗತಿಪರ ಹೋರಾಟಗಾರ ನಗರಗೆರೆ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...